ಇಸ್ಲಾಮಾಬಾದ್ : ಪಾಕಿಸ್ತಾನ ಮೂಲದ ಲಷ್ಕರ್ ತೋಯ್ಬಾ ಸಂಘಟನೆಯ ಹಿರಿಯ ಕಮಾಂಡರ್ ಅಕ್ರಂ ಖಾನ್ ಘಾಜಿ ಕೊಲೆ ಹಿನ್ನಲೆಯಲ್ಲೇ ಮತ್ತೊಬ್ಬ ಉಗ್ರನ ಹತ್ಯೆ ನಡೆದಿದೆ. ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಹಾಗೂ ಮೌಲಾನ್ ಮಸೂದ್ ಅಕರ್ನ ಆಪ್ತ ಸ್ನೇಹಿತ ಮೌಲಾನಾ ರಹೀಮ್ ಉಲ್ಲಾ ತಾರೀಖ್ನನ್ನು ಹತ್ತಿಕ್ಕಿ ಕೊಂದಿದ್ದಾರೆ.
ಕರಾಚಿಯಲ್ಲಿ ಭಾರತ ವಿರೋಧಿ ಸಮಾವೇಷದಲ್ಲಿ ಭಾಷಣ ಮಾಡಲು ತೆರಳುತ್ತಿದ್ದಾಗ ಕರಾಚಿಯ ಓರಂಗಿ ಪಟ್ಟಣ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ರಹೀಮ್ ಉಲ್ಲಾ ತಾರೀಖ್ ಓರ್ವ ಮೌಲಾನಾಗಿದ್ದು, ತನ್ನ ಭಾಷಣಗಳನ್ನು ಸಾವಿರಾರು ಜನರು ಸೇರುವ ಧಾರ್ಮಿಕ ಸಮಾವೇಶಗಳಲ್ಲಿ ಭಾರತ ವಿರೋಧಿ ಭಾಷಣ ಮಾಡುತ್ತಿದ್ದನು. ಜತೆಗೆ ಲಷ್ಕರ್ ಸಂಘಟನೆಗೆ ಯುವಕರನ್ನು ಪ್ರಚೋದಿಸುವುದು, ನೇಮಕ ಮಾಡುವ ಹೊಣೆಗಾರಿಕೆಯನ್ನು ನೋಡಿಕೊಳ್ಳುತ್ತಿದ್ದನು. ಭಾರತದ ಕಾಶ್ಮೀರಿ ಕಣಿವೆಯಲ್ಲಿ ಉಗ್ರರ ದಾಳಿಯಲ್ಲಿ ಈತನ ಪಾಲು ಇತ್ತು.
ಇಂದು ಅಪರಿವಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿ ಕೊಂದಿದ್ದು, ಈ ಹತ್ಯೆಗಳ ಹಿನ್ನಲೆ ನಿಗೂಢವಾಗಿಯೇ ಉಳಿದಿದೆ. ಮತ್ತು ಈ ದಾಳಿಗಳ ಬಗ್ಗೆ ಇದುವರೆಗೂ ಯಾವುದೇ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲದೇ ಇರುವುದು ಹಲವು ಕೌತುಕಗಳಿಗೆ ದಾರಿ ಮಾಡಿಕೊಟ್ಟಿದೆ.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…
ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…