ಇಸ್ಲಾಮಾಬಾದ್ : ಪಾಕಿಸ್ತಾನ ಮೂಲದ ಲಷ್ಕರ್ ತೋಯ್ಬಾ ಸಂಘಟನೆಯ ಹಿರಿಯ ಕಮಾಂಡರ್ ಅಕ್ರಂ ಖಾನ್ ಘಾಜಿ ಕೊಲೆ ಹಿನ್ನಲೆಯಲ್ಲೇ ಮತ್ತೊಬ್ಬ ಉಗ್ರನ ಹತ್ಯೆ ನಡೆದಿದೆ. ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಹಾಗೂ ಮೌಲಾನ್ ಮಸೂದ್ ಅಕರ್ನ ಆಪ್ತ ಸ್ನೇಹಿತ ಮೌಲಾನಾ ರಹೀಮ್ ಉಲ್ಲಾ ತಾರೀಖ್ನನ್ನು ಹತ್ತಿಕ್ಕಿ ಕೊಂದಿದ್ದಾರೆ.
ಕರಾಚಿಯಲ್ಲಿ ಭಾರತ ವಿರೋಧಿ ಸಮಾವೇಷದಲ್ಲಿ ಭಾಷಣ ಮಾಡಲು ತೆರಳುತ್ತಿದ್ದಾಗ ಕರಾಚಿಯ ಓರಂಗಿ ಪಟ್ಟಣ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ರಹೀಮ್ ಉಲ್ಲಾ ತಾರೀಖ್ ಓರ್ವ ಮೌಲಾನಾಗಿದ್ದು, ತನ್ನ ಭಾಷಣಗಳನ್ನು ಸಾವಿರಾರು ಜನರು ಸೇರುವ ಧಾರ್ಮಿಕ ಸಮಾವೇಶಗಳಲ್ಲಿ ಭಾರತ ವಿರೋಧಿ ಭಾಷಣ ಮಾಡುತ್ತಿದ್ದನು. ಜತೆಗೆ ಲಷ್ಕರ್ ಸಂಘಟನೆಗೆ ಯುವಕರನ್ನು ಪ್ರಚೋದಿಸುವುದು, ನೇಮಕ ಮಾಡುವ ಹೊಣೆಗಾರಿಕೆಯನ್ನು ನೋಡಿಕೊಳ್ಳುತ್ತಿದ್ದನು. ಭಾರತದ ಕಾಶ್ಮೀರಿ ಕಣಿವೆಯಲ್ಲಿ ಉಗ್ರರ ದಾಳಿಯಲ್ಲಿ ಈತನ ಪಾಲು ಇತ್ತು.
ಇಂದು ಅಪರಿವಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿ ಕೊಂದಿದ್ದು, ಈ ಹತ್ಯೆಗಳ ಹಿನ್ನಲೆ ನಿಗೂಢವಾಗಿಯೇ ಉಳಿದಿದೆ. ಮತ್ತು ಈ ದಾಳಿಗಳ ಬಗ್ಗೆ ಇದುವರೆಗೂ ಯಾವುದೇ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲದೇ ಇರುವುದು ಹಲವು ಕೌತುಕಗಳಿಗೆ ದಾರಿ ಮಾಡಿಕೊಟ್ಟಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…