ಅಂತಾರಾಷ್ಟ್ರೀಯ

ಗಾಜಾ ಆಸ್ಪತ್ರೆ ಸ್ಫೋಟ: ಇಸ್ರೇಲ್-ಹಮಾಸ್ ನಡುವೆ ಆರೋಪ-ಪ್ರತ್ಯಾರೋಪ

ಟೆಲ್ ಅವಿವ್ : ಗಾಜಾದಲ್ಲಿನ ಆಸ್ಪತ್ರೆಯಲ್ಲಿ ಮಂಗಳವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 500 ಜನರು ಮೃತಪಟ್ಟಿದ್ದಾರೆ ಎಂದು ಹಮಾಸ್ ಆಡಳಿತದ ಆರೋಗ್ಯ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ಈ ಘಟನೆ ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಇಸ್ರೇಲಿ ವಾಯುದಾಳಿಯು ಅಮಾಯಕರನ್ನು ಕೊಂದಿದೆ ಎಂದು ಸ್ಥಳೀಯ ಅಧಿಕಾರಿಗಳು ಆರೋಪಿಸಿದ್ದರೆ, ಹಮಾಸ್ ಉಗ್ರರ ರಾಕೆಟ್ ದಾಳಿ ಕೈಕೊಟ್ಟು ಈ ಅವಘಡ ಸಂಭವಿಸಿದೆ ಎಂದು ಇಸ್ರೇಲ್ ಪ್ರತ್ಯಾರೋಪ ಮಾಡಿದೆ.

“ಈ ಘಟನೆಗೆ ಇಸ್ಲಾಮಿಕ್ ಜಿಹಾದ್ ಕಾರಣವಾಗಿದ್ದು, ಅದು ಉಡಾಯಿಸಿದ ರಾಕೆಟ್ ವಿಫಲಗೊಂಡು ಗಾಜಾದ ಆಸ್ಪತ್ರೆಗೆ ಅಪ್ಪಳಿಸಿದೆ ಎಂಬುದನ್ನು ವಿವಿಧ ಮೂಲಗಳ ಗುಪ್ತಚರ ಮಾಹಿತಿಗಳು ತಿಳಿಸಿವೆ” ಎಂದು ಇಸ್ರೇಲ್ ಸೇನೆ ಹೇಳಿದೆ.

ಈ ಘಟನೆ ಸಂದರ್ಭದಲ್ಲಿ ಇಸ್ರೇಲ್ ಆಸ್ಪತ್ರೆ ಸಮೀಪ ಯಾವುದೇ ವೈಮಾನಿಕ ಕಾರ್ಯಾಚರಣೆ ನಡೆಸುತ್ತಿರಲಿಲ್ಲ ಹಾಗೂ ಅಲ್ಲಿ ಬಳಸಿದ ರಾಕೆಟ್‌ಗಳು ತಮ್ಮ ಸಾಧನಕ್ಕೆ ಹೋಲಿಕೆಯಾಗುತ್ತಿಲ್ಲ ಎಂದು ವಕ್ತಾರ ಡೇನಿಯಲ್ ಹಗಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಮಾಸ್ ಉಗ್ರ ಸಂಘಟನೆಯ ಮಿತ್ರ ಗುಂಪು ಇಸ್ಲಾಮಿಕ್ ಜಿಹಾದ್ ಕೂಡ ಹೇಳಿಕೆ ಬಿಡುಗಡೆ ಮಾಡಿದೆ. “ಗಾಜಾದಲ್ಲಿನ ಬ್ಯಾಪ್ಟಿಸ್ಟ್ ಅರಬ್ ನ್ಯಾಷನಲ್ ಆಸ್ಪತ್ರೆಯ ಮೇಲೆ ಬಾಂಬ್ ದಾಳಿ ಮೂಲಕ ನಡೆಸಿದ ಬರ್ಬರ ಹತ್ಯಾಕಾಂಡದಲ್ಲಿನ ತನ್ನ ಹೊಣೆಗಾರಿಕೆಯಿಂದ ಸುಳ್ಳುಗಳ ಹೆಣಿಗೆಗಳ ಮೂಲಕ ಹಾಗೂ ಪ್ಯಾಲೆಸ್ಟೀನ್‌ನ ಇಸ್ಲಾಮಿಕ್ ಜಿಹಾದ್ ಚಳವಳಿಯ ಕಡೆ ಬೆರಳು ತೋರಿಸುವ ಮೂಲಕ ತಪ್ಪಿಸಿಕೊಳ್ಳಲು ಜಿಯೋನಿಸ್ಟ್ ಶತ್ರು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾನೆ” ಎಂದು ಅದು ಆರೋಪಿಸಿದೆ.

ದಾಳಿಗೆ ವ್ಯಾಪಕ ಖಂಡನೆ : ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಇಸ್ರೇಲ್‌ಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿಯೇ ಈ ಭಯಾನಕ ದಾಳಿ ನಡೆದಿದೆ. “ಗಾಜಾದಲ್ಲಿನ ಅಲ್- ಅಹ್ಲಿ ಅರಬ್ ಆಸ್ಪತ್ರೆಯಲ್ಲಿ ನಡೆದ ಸ್ಫೋಟ ಮತ್ತು ಅದರ ಪರಿಣಾಮ ಉಂಟಾದ ಭಾರಿ ಜೀವ ಹಾನಿಯಿಂದ ನನಗೆ ಆಕ್ರೋಶ ಹಾಗೂ ದುಃಖ ಉಂಟಾಗಿದೆ” ಎಂದು ಬೈಡನ್ ಹೇಳಿಕೆ ನೀಡಿದ್ದಾರೆ.

ಈ ಭೀಕರ ವಾಯು ದಾಳಿಯನ್ನು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಬಲವಾಗಿ ಖಂಡಿಸಿದ್ದಾರೆ. ಇದು ‘ಭಯಾನಕ ದಾಳಿ’ ಎಂದಿದ್ದಾರೆ. “ಸಂತ್ರಸ್ತರ ಕುಟುಂಬದವರಿಗಾಗಿ ನನ್ನ ಹೃದಯ ಮಿಡಿಯುತ್ತಿದೆ. ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಿಬ್ಬಂದಿಯು ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿ ರಕ್ಷಣೆ ಹೊಂದಿವೆ” ಎಂದು ಗುಟೆರಸ್ ಹೇಳಿದ್ದಾರೆ.

ಬೈಡನ್ ಜತೆಗಿನ ಸಭೆ ರದ್ದು : ಆಸ್ಪತ್ರೆ ಮೇಲಿನ ಬಾಂಬ್ ದಾಳಿ ವಿರೋಧಿಸಿ ಇರಾನ್‌ನ ಟೆಹರಾನ್‌ನಲ್ಲಿನ ಬ್ರಿಟನ್ ಮತ್ತು ಫ್ರಾನ್ಸ್ ರಾಯಭಾರ ಕಚೇರಿಗಳ ಹೊರಗೆ ನೂರಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಒಂದು ದಿನದ ಸಾರ್ವಜನಿಕ ಶೋಕ ಪ್ರಕಟಿಸಿದ್ದಾರೆ. ದಾಳಿಗೆ ಇಸ್ರೇಲ್ ಮತ್ತು ಅಮೆರಿಕ ಕಾರಣ ಎಂದು ದೂಷಿಸಿದ್ದಾರೆ.

“ಗಾಜಾದ ಆಸ್ಪತ್ರೆಯಲ್ಲಿನ ಪ್ಯಾಲೆಸ್ಟೀನ್ ಸಂತ್ರಸ್ತರನ್ನು ಗಾಯಗೊಳಿಸಿದ ಅಮೆರಿಕ- ಇಸ್ರೇಲ್ ಬಾಂಬ್‌ಗಳ ಜ್ವಾಲೆಗಳು ಜಿಯೋನಿಸ್ಟ್‌ಗಳನ್ನು ಶೀಘ್ರದಲ್ಲಿಯೇ ಆಹುತಿ ಪಡೆಯಲಿದೆ” ಎಂದಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆ ಜೋ ಬೈಡನ್ ಮಾತುಕತೆ ನಡೆಸಿದ್ದಾರೆ. ಆದರೆ ಬುಧವಾರ ಬೈಡನ್ ಜತೆ ಅಮ್ಮಾನ್‌ನಲ್ಲಿ ನಿಗದಿಯಾಗಿದ್ದ ಪ್ರಾದೇಶಿಕ ಸಭೆಯನ್ನು ಜೋರ್ಡಾನ್ ರದ್ದುಗೊಳಿಸಿದೆ. ಜೋರ್ಡಾನ್ ರಾಜ ಅಬ್ದುಲ್ಲಾ II, ಪ್ಯಾಲೆಸ್ಟೀನ್ ಅಧ್ಯಕ್ಷ ಮಹಮೌದ್ ಅಬ್ಬಾಸ್, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್ ಸಿಸ್ಸಿ ಅವರು ಬೈಡನ್ ಜತೆಗಿನ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.

andolanait

Share
Published by
andolanait

Recent Posts

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

23 mins ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

26 mins ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

50 mins ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

1 hour ago

ನಂಜನಗೂಡು: ಗುಜರಿಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲು

ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…

1 hour ago

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

2 hours ago