ಅಂತಾರಾಷ್ಟ್ರೀಯ

ಅಜ್ಜಿಯ ಕೋಟಿಗಟ್ಟಲೆ ಆಸ್ತಿ ʼನಾಯಿ-ಬೆಕ್ಕುʼಗಳ ಪಾಲು!

ಚೀನಾ: ಲೀಯು ಎಂಬ ಚೀನಾದ ವೃದ್ಧೆಯೋರ್ವಳು ತನ್ನ ಮಕ್ಕಳ ವರ್ತನೆಯಿಂದ ಬೇಸತ್ತು, ತಾನು ಸಾಕಿದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ಬರೆದಿದ್ದಾಳೆ.

ಚೀನಾದ ಶಾಂಘೈನಲ್ಲಿ ಈ ಘಟನೆ ನಡೆದಿದ್ದು, ಲೀಯು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರನ್ನು ಭೇಟಿಯಾಗಲು ಅವರ ಮಕ್ಕಳು ಬರಲಿಲ್ಲ.

ಫೋನ್ ಮಾಡಿಯೂ ಮಾತನಾಡಲಿಲ್ಲ. ತಾಯಿಯ ಬಗ್ಗೆ ಮಕ್ಕಳಿಗೆ ಯಾವುದೇ ಕಾಳಜಿ ಇಲ್ಲದಂತೆ, ಮಕ್ಕಳು ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ ಲೀಯು ಜೊತೆ ಪ್ರತಿದಿನವೂ ನಿಯತ್ತಿನಿಂದ ಇದ್ದಿದ್ದು ಮಾತ್ರ, ಅವಳು ಸಾಕಿದ್ದ ನಾಯಿ ಮತ್ತು ಬೆಕ್ಕು.

ಇದೀಗ ಲೀಯು ತನ್ನ 23 ಕೋಟಿಗೂ ಮೀರಿದ ಆಸ್ತಿಯನ್ನು ತಾನು ಸಾಕಿದ ನಾಯಿ ಮತ್ತು ಬೆಕ್ಕಿಗೆ ಬರೆದಿಟ್ಟಿದ್ದಾರೆ. ಆಕೆಯ ಸಾವಿನ ಬಳಿಕ ಆ ಆಸ್ತಿ ಪಶು ಚಿಕಿತ್ಸಾಲಯಕ್ಕೆ ಸೇರುತ್ತದೆ. ಮತ್ತು ಅವರು ಈಕೆಯ ಸಾಕು ಪ್ರಾಣಿಗಳನ್ನು ಕಾಳಜಿಯಿಂದ ನೋಡಿಕೊಳ್ಳುವ ಜವಾಬ್ದಾರಿ ಹೊರಬೇಕಾಗುತ್ತದೆ.

ಈ ಬಗ್ಗೆ ಮಾತನಾಡಿರುವ ಲೀಯು, ನನ್ನ ಮಕ್ಕಳು ನನಗೆ ಅನಾರೋಗ್ಯವೆಂದು ಗೊತ್ತಿದ್ದರೂ, ನನ್ನನ್ನು ಬಂದು ಭೇಟಿಯಾಗಲಿಲ್ಲ. ಫೋನನ್ ಮಾಡಿಯಾದರೂ ಮಾತನಾಡಬಹುದಿತ್ತು.

ಅದನ್ನೂ ಮಾಡಲಿಲ್ಲ. ನನ್ನೊಂದಿಗೆ ಪ್ರೀತಿಯಿಂದ ಇರುವುದು ನಾನು ಸಾಕಿದ ನಾಯಿ ಮತ್ತು ಬೆಕ್ಕು. ಹಾಗಾಗಿ ಇವುಗಳ ಹೆಸರಿಗೆ ನನ್ನ ಆಸ್ತಿಯನ್ನು ಬರೆದಿದ್ದೇನೆ. ನನ್ನ ಮರಣದ ನಂತರ, ಈ ಮಕ್ಕಳನ್ನು ಯಾರು ಕಾಳಜಿಯಿಂದ ಕಾಣುತ್ತಾರೋ, ಅವರಿಗೆ ನನ್ನೆಲ್ಲ ಆಸ್ತಿ ಹೋಗುತ್ತದೆ ಎಂದಿದ್ದಾರೆ.

andolanait

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

35 mins ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

38 mins ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

1 hour ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

1 hour ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

2 hours ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

2 hours ago