ಅಂತಾರಾಷ್ಟ್ರೀಯ

ಸಂಗೀತೋತ್ಸವ ಮೇಲೆ ಹಮಾಸ್ ದಾಳಿ: 260 ಮೃತದೇಹ ಪತ್ತೆ

ಟೆಲ್ ಅವೀವ್ : ಇಸ್ರೇಲ್ ಮೇಲೆ ಮಿಂಚಿನ ದಾಳಿ ನಡೆಸಿದ ಹಮಾಸ್ ಕಾರ್ಯಕರ್ತರ ಕೆಂಗಣ್ಣು, ಸಾವಿರಾರು ಮಂದಿ ಪಾಲ್ಗೊಂಡಿದ್ದ ಟೆಕ್ನೋ ಸಂಗೀತೋತ್ಸವದ ಮೇಲೂ ಬಿದ್ದಿದೆ. ಗಾಜಾ ಸಮೀಪದ ಮರುಭೂಮಿಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವದಲ್ಲಿ ದಾಳಿ ನಡೆದ ಸ್ಥಳದಿಂದ ಝಾಕಾ ಪರಿಹಾರ ಕಾರ್ಯಾಚರಣೆ ತಂಡ 260ಕ್ಕೂ ಹೆಚ್ಚು ಶವಗಳನ್ನು ಹೊರತೆಗೆದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ದಾಳಿಯ ಹಲವು ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರಿಸ್ಥಿತಿಯ ಭೀಕರತೆಯನ್ನು ಬಿಂಬಿಸುತ್ತಿವೆ. ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಇಸ್ರೇಲಿ ವಿದ್ಯಾರ್ಥಿನಿಯೊಬ್ಬಳನ್ನು ಹಮಾಸ್ ಹೋರಾಟಗಾರರ ತಂಡ ಅಪಹರಿಸಿದ್ದು, 30 ಮಂದಿ ತಮ್ಮ ವಶದಲ್ಲಿದ್ದಾರೆ ಎಂದು ಈ ಗುಂಪು ಹೇಳಿದೆ.

https://x.com/senguptacanada/status/1711111363198616043?s=20

ಈ ಮಧ್ಯೆ ಇಸ್ರೇಲ್ಗೆ ಬೆಂಬಲವಾಗಿ ಅಮೆರಿಕದ ಯುದ್ಧವಿಮಾನಗಳು ಮತ್ತು ಯುದ್ಧನೌಕೆಗಳನ್ನು ಇಸ್ರೇಲ್ನ ಸನಿಹಕ್ಕೆ ಒಯ್ಯಲು ಅಧ್ಯಕ್ಷ ಜೋ ಬೈಡನ್ ಆದೇಶಿಸಿದ್ದಾರೆ. ಹಮಾಸ್ ದಾಳಿಯ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ಸೇನಾ ನೆರವನ್ನು ಇಸ್ರೇಲ್ಗೆ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಅಮೆರಿಕದ ನಾಲ್ಕು ಮಂದಿ ಪ್ರಜೆಗಳೂ ಇಸ್ರೇಲ್ ಮೇಲೆ ನಡೆದ ದಾಳಿಯ ವೇಳೆ ಜೀವ ಕಳೆದುಕೊಂಡಿದ್ದಾರೆ.

ಇಸ್ರೇಲ್ ಸೇನೆ ಹಮಾಸ್ ಕಾರ್ಯಕರ್ತರ ಮೇಲೆ ಪ್ರತಿದಾಳಿಯನ್ನು ನಡೆಸುತ್ತಿದ್ದು, ದಕ್ಷಿಣ ಇಸ್ರೇಲ್ ನ ಬೀದಿ ಬೀದಿಗಳಲ್ಲಿ ಕದನ ಮಂದುವರಿದಿದೆ.

https://x.com/senguptacanada/status/1711111363198616043?s=20

andolanait

Share
Published by
andolanait

Recent Posts

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

33 mins ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

42 mins ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

48 mins ago

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

53 mins ago

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

1 hour ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

2 hours ago