ಅಂತಾರಾಷ್ಟ್ರೀಯ

ಸಂಗೀತೋತ್ಸವ ಮೇಲೆ ಹಮಾಸ್ ದಾಳಿ: 260 ಮೃತದೇಹ ಪತ್ತೆ

ಟೆಲ್ ಅವೀವ್ : ಇಸ್ರೇಲ್ ಮೇಲೆ ಮಿಂಚಿನ ದಾಳಿ ನಡೆಸಿದ ಹಮಾಸ್ ಕಾರ್ಯಕರ್ತರ ಕೆಂಗಣ್ಣು, ಸಾವಿರಾರು ಮಂದಿ ಪಾಲ್ಗೊಂಡಿದ್ದ ಟೆಕ್ನೋ ಸಂಗೀತೋತ್ಸವದ ಮೇಲೂ ಬಿದ್ದಿದೆ. ಗಾಜಾ ಸಮೀಪದ ಮರುಭೂಮಿಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವದಲ್ಲಿ ದಾಳಿ ನಡೆದ ಸ್ಥಳದಿಂದ ಝಾಕಾ ಪರಿಹಾರ ಕಾರ್ಯಾಚರಣೆ ತಂಡ 260ಕ್ಕೂ ಹೆಚ್ಚು ಶವಗಳನ್ನು ಹೊರತೆಗೆದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ದಾಳಿಯ ಹಲವು ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರಿಸ್ಥಿತಿಯ ಭೀಕರತೆಯನ್ನು ಬಿಂಬಿಸುತ್ತಿವೆ. ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಇಸ್ರೇಲಿ ವಿದ್ಯಾರ್ಥಿನಿಯೊಬ್ಬಳನ್ನು ಹಮಾಸ್ ಹೋರಾಟಗಾರರ ತಂಡ ಅಪಹರಿಸಿದ್ದು, 30 ಮಂದಿ ತಮ್ಮ ವಶದಲ್ಲಿದ್ದಾರೆ ಎಂದು ಈ ಗುಂಪು ಹೇಳಿದೆ.

https://x.com/senguptacanada/status/1711111363198616043?s=20

ಈ ಮಧ್ಯೆ ಇಸ್ರೇಲ್ಗೆ ಬೆಂಬಲವಾಗಿ ಅಮೆರಿಕದ ಯುದ್ಧವಿಮಾನಗಳು ಮತ್ತು ಯುದ್ಧನೌಕೆಗಳನ್ನು ಇಸ್ರೇಲ್ನ ಸನಿಹಕ್ಕೆ ಒಯ್ಯಲು ಅಧ್ಯಕ್ಷ ಜೋ ಬೈಡನ್ ಆದೇಶಿಸಿದ್ದಾರೆ. ಹಮಾಸ್ ದಾಳಿಯ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ಸೇನಾ ನೆರವನ್ನು ಇಸ್ರೇಲ್ಗೆ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಅಮೆರಿಕದ ನಾಲ್ಕು ಮಂದಿ ಪ್ರಜೆಗಳೂ ಇಸ್ರೇಲ್ ಮೇಲೆ ನಡೆದ ದಾಳಿಯ ವೇಳೆ ಜೀವ ಕಳೆದುಕೊಂಡಿದ್ದಾರೆ.

ಇಸ್ರೇಲ್ ಸೇನೆ ಹಮಾಸ್ ಕಾರ್ಯಕರ್ತರ ಮೇಲೆ ಪ್ರತಿದಾಳಿಯನ್ನು ನಡೆಸುತ್ತಿದ್ದು, ದಕ್ಷಿಣ ಇಸ್ರೇಲ್ ನ ಬೀದಿ ಬೀದಿಗಳಲ್ಲಿ ಕದನ ಮಂದುವರಿದಿದೆ.

https://x.com/senguptacanada/status/1711111363198616043?s=20

andolanait

Share
Published by
andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

4 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

5 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

5 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

5 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

5 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

5 hours ago