ಅಂತಾರಾಷ್ಟ್ರೀಯ

ಸಂಗೀತೋತ್ಸವ ಮೇಲೆ ಹಮಾಸ್ ದಾಳಿ: 260 ಮೃತದೇಹ ಪತ್ತೆ

ಟೆಲ್ ಅವೀವ್ : ಇಸ್ರೇಲ್ ಮೇಲೆ ಮಿಂಚಿನ ದಾಳಿ ನಡೆಸಿದ ಹಮಾಸ್ ಕಾರ್ಯಕರ್ತರ ಕೆಂಗಣ್ಣು, ಸಾವಿರಾರು ಮಂದಿ ಪಾಲ್ಗೊಂಡಿದ್ದ ಟೆಕ್ನೋ ಸಂಗೀತೋತ್ಸವದ ಮೇಲೂ ಬಿದ್ದಿದೆ. ಗಾಜಾ ಸಮೀಪದ ಮರುಭೂಮಿಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವದಲ್ಲಿ ದಾಳಿ ನಡೆದ ಸ್ಥಳದಿಂದ ಝಾಕಾ ಪರಿಹಾರ ಕಾರ್ಯಾಚರಣೆ ತಂಡ 260ಕ್ಕೂ ಹೆಚ್ಚು ಶವಗಳನ್ನು ಹೊರತೆಗೆದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ದಾಳಿಯ ಹಲವು ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರಿಸ್ಥಿತಿಯ ಭೀಕರತೆಯನ್ನು ಬಿಂಬಿಸುತ್ತಿವೆ. ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಇಸ್ರೇಲಿ ವಿದ್ಯಾರ್ಥಿನಿಯೊಬ್ಬಳನ್ನು ಹಮಾಸ್ ಹೋರಾಟಗಾರರ ತಂಡ ಅಪಹರಿಸಿದ್ದು, 30 ಮಂದಿ ತಮ್ಮ ವಶದಲ್ಲಿದ್ದಾರೆ ಎಂದು ಈ ಗುಂಪು ಹೇಳಿದೆ.

https://x.com/senguptacanada/status/1711111363198616043?s=20

ಈ ಮಧ್ಯೆ ಇಸ್ರೇಲ್ಗೆ ಬೆಂಬಲವಾಗಿ ಅಮೆರಿಕದ ಯುದ್ಧವಿಮಾನಗಳು ಮತ್ತು ಯುದ್ಧನೌಕೆಗಳನ್ನು ಇಸ್ರೇಲ್ನ ಸನಿಹಕ್ಕೆ ಒಯ್ಯಲು ಅಧ್ಯಕ್ಷ ಜೋ ಬೈಡನ್ ಆದೇಶಿಸಿದ್ದಾರೆ. ಹಮಾಸ್ ದಾಳಿಯ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ಸೇನಾ ನೆರವನ್ನು ಇಸ್ರೇಲ್ಗೆ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಅಮೆರಿಕದ ನಾಲ್ಕು ಮಂದಿ ಪ್ರಜೆಗಳೂ ಇಸ್ರೇಲ್ ಮೇಲೆ ನಡೆದ ದಾಳಿಯ ವೇಳೆ ಜೀವ ಕಳೆದುಕೊಂಡಿದ್ದಾರೆ.

ಇಸ್ರೇಲ್ ಸೇನೆ ಹಮಾಸ್ ಕಾರ್ಯಕರ್ತರ ಮೇಲೆ ಪ್ರತಿದಾಳಿಯನ್ನು ನಡೆಸುತ್ತಿದ್ದು, ದಕ್ಷಿಣ ಇಸ್ರೇಲ್ ನ ಬೀದಿ ಬೀದಿಗಳಲ್ಲಿ ಕದನ ಮಂದುವರಿದಿದೆ.

https://x.com/senguptacanada/status/1711111363198616043?s=20

andolanait

Share
Published by
andolanait

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

37 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

40 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

48 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

54 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

59 mins ago