ಟೆಲ್ ಅವೀವ್ : ಇಸ್ರೇಲ್ ಮೇಲೆ ಮಿಂಚಿನ ದಾಳಿ ನಡೆಸಿದ ಹಮಾಸ್ ಕಾರ್ಯಕರ್ತರ ಕೆಂಗಣ್ಣು, ಸಾವಿರಾರು ಮಂದಿ ಪಾಲ್ಗೊಂಡಿದ್ದ ಟೆಕ್ನೋ ಸಂಗೀತೋತ್ಸವದ ಮೇಲೂ ಬಿದ್ದಿದೆ. ಗಾಜಾ ಸಮೀಪದ ಮರುಭೂಮಿಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವದಲ್ಲಿ ದಾಳಿ ನಡೆದ ಸ್ಥಳದಿಂದ ಝಾಕಾ ಪರಿಹಾರ ಕಾರ್ಯಾಚರಣೆ ತಂಡ 260ಕ್ಕೂ ಹೆಚ್ಚು ಶವಗಳನ್ನು ಹೊರತೆಗೆದಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆ ವರದಿ ಮಾಡಿದೆ.
ದಾಳಿಯ ಹಲವು ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪರಿಸ್ಥಿತಿಯ ಭೀಕರತೆಯನ್ನು ಬಿಂಬಿಸುತ್ತಿವೆ. ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಇಸ್ರೇಲಿ ವಿದ್ಯಾರ್ಥಿನಿಯೊಬ್ಬಳನ್ನು ಹಮಾಸ್ ಹೋರಾಟಗಾರರ ತಂಡ ಅಪಹರಿಸಿದ್ದು, 30 ಮಂದಿ ತಮ್ಮ ವಶದಲ್ಲಿದ್ದಾರೆ ಎಂದು ಈ ಗುಂಪು ಹೇಳಿದೆ.
https://x.com/senguptacanada/status/1711111363198616043?s=20
ಈ ಮಧ್ಯೆ ಇಸ್ರೇಲ್ಗೆ ಬೆಂಬಲವಾಗಿ ಅಮೆರಿಕದ ಯುದ್ಧವಿಮಾನಗಳು ಮತ್ತು ಯುದ್ಧನೌಕೆಗಳನ್ನು ಇಸ್ರೇಲ್ನ ಸನಿಹಕ್ಕೆ ಒಯ್ಯಲು ಅಧ್ಯಕ್ಷ ಜೋ ಬೈಡನ್ ಆದೇಶಿಸಿದ್ದಾರೆ. ಹಮಾಸ್ ದಾಳಿಯ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ಸೇನಾ ನೆರವನ್ನು ಇಸ್ರೇಲ್ಗೆ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಅಮೆರಿಕದ ನಾಲ್ಕು ಮಂದಿ ಪ್ರಜೆಗಳೂ ಇಸ್ರೇಲ್ ಮೇಲೆ ನಡೆದ ದಾಳಿಯ ವೇಳೆ ಜೀವ ಕಳೆದುಕೊಂಡಿದ್ದಾರೆ.
ಇಸ್ರೇಲ್ ಸೇನೆ ಹಮಾಸ್ ಕಾರ್ಯಕರ್ತರ ಮೇಲೆ ಪ್ರತಿದಾಳಿಯನ್ನು ನಡೆಸುತ್ತಿದ್ದು, ದಕ್ಷಿಣ ಇಸ್ರೇಲ್ ನ ಬೀದಿ ಬೀದಿಗಳಲ್ಲಿ ಕದನ ಮಂದುವರಿದಿದೆ.
https://x.com/senguptacanada/status/1711111363198616043?s=20
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…