ಅಂತಾರಾಷ್ಟ್ರೀಯ

ಗಾಜಾ ಮೇಲಿನ ದಾಳಿಯನ್ನು ಕೊಂಚ ಸಡಿಲಿಸಿದ ಇಸ್ರೇಲ್

ಟೆಲ್ ಅವಿವ್ : ಇಸ್ರೇಲ್-ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಇದೀಗ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೃಢಪಡಿಸಿದ್ದಾರೆ.

ಗಾಜಾದ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್ ಯುದ್ಧದ ವಲಯದಲ್ಲಿ ನೆಲೆಸಿರುವ ನಾಗರಿಕರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳಲು ಅನುವುಮಾಡಿಕೊಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಯುದ್ಧಕ್ಕೆ ಸಂಪೂರ್ಣ ವಿರಾಮವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ದಿನದಲ್ಲಿ 20 ಗಂಟೆ ಯುದ್ಧ ನಡೆದರೆ 4 ಗಂಟೆ ದಾಳಿ ನಡೆಸುವುದಿಲ್ಲ ಎಂದು ನೆತನ್ಯಾಹು ತಿಳಿಸಿದ್ದಾರೆ.

ಆದರೆ ಹಮಾಸ್ ಉಗ್ರರ ವಿರುದ್ಧದ ದಾಳಿ ಎಂದಿಗೂ ನಿಲ್ಲುವುದಿಲ್ಲ. ಇಸ್ರೇಲ್‌ನ ದಾಳಿಯಿಂದಾಗಿ ಸಾಮಾನ್ಯ ಜನರಿಗೆ ತೊಂದರೆಯಾಗಬಾರದು ಎಂದು ಪ್ರತಿ ದಿನ 4 ಗಂಟೆ ದಾಳಿ ನಿಲ್ಲಿಸಲಾಗುತ್ತದೆ. ಆದರೆ ಹಮಾಸ್ ಉಗ್ರರ ವಿರುದ್ಧ ದಾಳಿ ಮುಂದುವರಿಯುತ್ತಲೇ ಇರುತ್ತದೆ. ನಾವು ಗಾಜಾ ನಗರವನ್ನು ವಶಪಡಿಸಿಕೊಳ್ಳಲು ಹಾಗೂ ಇಡೀ ನಗರದ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುತ್ತಿಲ್ಲ. ಆದರೆ ಉಗ್ರರನ್ನು ಮಾತ್ರ ಸುಮ್ಮನೆ ಬಿಡಲಾಗುವುದಿಲ್ಲ ಎಂದಿದ್ದಾರೆ.

ಇಸ್ರೇಲ್‌ನಲ್ಲಿ 1,400 ಜನರನ್ನು ಕೊಂದಿರುವ ಹಮಾಸ್ ಉಗ್ರರು ಇನ್ನು ಕೂಡಾ ಮಕ್ಕಳು, ವೃದ್ಧರು ಸೇರಿದಂತೆ 239 ಜನರನ್ನು ಒತ್ತೆಯಾಳುಗಳನ್ನಾಗಿ ಇಟ್ಟುಕೊಂಡಿದ್ದಾರೆ ಎಂದು ಇಸ್ರೇಲ್‌ನ ಅಧಿಕಾರಿಗಳು ಹೇಳಿದ್ದಾರೆ. ಅವರಲ್ಲಿ ಸುಮಾರು 10 ಅಮೆರಿಕನ್ನರು ಸೇರಿದ್ದಾರೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾದ ಮೇಲಿನ ದಾಳಿಗೆ ಇಲ್ಲಿಯವರೆಗೆ 10,800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

lokesh

Share
Published by
lokesh
Tags: isrelwar

Recent Posts

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

13 mins ago

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

1 hour ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

1 hour ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

6 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

6 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

6 hours ago