ಅಂತಾರಾಷ್ಟ್ರೀಯ

ಭಾರತ ಸೇರಿದಂತೆ ಯಾವ ಯಾವ ದೇಶಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹುಲಿಗಳಿವೆ ಗೊತ್ತಾ.?

ನವದೆಹಲಿ: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯು ಸುಂದರ ಹಾಗು ಅಳಿವಿನಂಚಿನಲ್ಲಿರುವ ಪ್ರಾಣಿ. ಈ ಭವ್ಯ ಜೀವಿ ಪ್ರಪಂಚದ ಆಯ್ದ ಪ್ರದೇಶಗಳಲ್ಲಿ ಮಾತ್ರ ಇವೆ ಅನ್ನೋದೇ ಅಚ್ಚರಿಯ ವಿಚಾರ.

ಅತೀ ಸುಂದರ ಹಾಗೂ ಭವ್ಯ ಜೀವಿ ಹುಲಿಯು ಸುಮಾರು ಕಡೆ ಇಲ್ಲವೇ ಇಲ್ಲ. ಭಾರತದಲ್ಲಿ ಅತೀಹೆಚ್ಚು ಹುಲಿಗಳಿದ್ದು, ದೇಶಕ್ಕೆ ಇದೊಂದು ಹೆಮ್ಮೆಯ ವಿಷಯ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ಭಾರತದಲ್ಲಿ ರಣಥಂಬೋರ್‌ ಹಾಗು ಬಾಂಧವಗಢದಂತಹ ಸ್ಥಳಗಳು ಹುಲಿಗಳ ನೆಲೆಗೆ ಹೆಸರುವಾಸಿಯಾಗಿವೆ. ಭಾರತ ಹೊರತುಪಡಿಸಿದರೆ ರಷ್ಯಾದಲ್ಲಿ ಅಮುರ್‌ ಹುಲಿಗಳು, ಇಂಡೋನೇಷ್ಯಾ ಸುಮಾತ್ರಾನ್‌ ಹುಲಿಗಳಿಗೆ ನೆಲೆಯಾಗಿದೆ. ನೇಪಾಳವು ಕೂಡ ಚಿತ್ವಾನ್‌ ಮತ್ತು ಬಾರ್ಡಿಯಾ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳನ್ನು ರಕ್ಷಿಸುತ್ತಿದೆ. ಇದಲ್ಲದೇ ಮಲೇಷ್ಯಾದ ಮಲಯನ್‌ ಹುಲಿಗಳು ಮಲಯ ಪರ್ಯಾಯ ದ್ವೀಪದಲ್ಲಿ ಸಂಚರಿಸುತ್ತವೆ. ಬಾಂಗ್ಲಾದೇಶವು ತನ್ನ ಮ್ಯಾಂಗ್ರೋವ್‌ ಕಾಡುಗಳಲ್ಲಿ ರಾಯಲ್‌ ಬೆಂಗಾಲ್‌ ಹುಲಿಗಳಿಗೆ ಆತಿಥ್ಯ ವಹಿಸುತ್ತದೆ.

ಇನ್ನೂ ಭಾರತದಲ್ಲಿ 2022ರ ಹುಲಿಗಣತಿಯಂತೆ 3167 ಹುಲಿಗಳನ್ನು ಹೊಂದಿರುವ ಮೂಲಕ ಈ ಚಾರ್ಟ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಹುಲಿಗಳನ್ನು ಸಂರಕ್ಷಣೆ ಮಾಡುವ ಪ್ರಯತ್ನದಲ್ಲಿ ಭಾರತವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ಕಾಡು ಹುಲಿಗಳಿಗೆ ಭಾರತವು ಜಾಗತಿಕ ನೆಲೆಯಾಗಿದೆ.

ಇದಲ್ಲದೇ ಬೇರೆ ದೇಶಗಳಲ್ಲಿ ಅಂದರೆ ರಷ್ಯಾದಲ್ಲಿ 371, ಇಂಡೋನೇಷ್ಯಾದಲ್ಲಿ 371, ನೇಪಾಳದಲ್ಲಿ 355, ಮಲೇಷ್ಯಾದಲ್ಲಿ 120, ಬಾಂಗ್ಲಾದೇಶದಲ್ಲಿ 106, ಥೈಲ್ಯಾಂಡ್‌ನಲ್ಲಿ 149 ಹುಲಿಗಳಿಗೆ ಎಂದು ಅಂದಾಜಿಸಲಾಗಿದೆ.

ಈ ಎಲ್ಲಾ ದೇಶಗಳಿಗಿಂತ ನಮ್ಮ ಭಾರತದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿದ್ದು, ತನ್ನ ವಿಸ್ತಾರವಾದ ರಾಷ್ಟ್ರೀಯ ಉದ್ಯಾನವನಗಳಾದ ರಣಥಂಬೋರ್‌, ಜಿಮ್‌ ಕಾರ್ಬೆಟ್‌ ಮತ್ತು ಬಾಂಧವ್‌ಗಢ್‌ಗಳಲ್ಲಿ ಅನೇಕ ಸಂಖ್ಯೆಯಲ್ಲಿ ಹುಲಿಗಳನ್ನು ಕಾಣಬಹುದಾಗಿದೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Share
Published by
ಕೆಂಡಗಣ್ಣಸ್ವಾಮಿ

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

24 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

53 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago