ಅಂತಾರಾಷ್ಟ್ರೀಯ

ಭಾರತ ಸೇರಿದಂತೆ ಯಾವ ಯಾವ ದೇಶಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹುಲಿಗಳಿವೆ ಗೊತ್ತಾ.?

ನವದೆಹಲಿ: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯು ಸುಂದರ ಹಾಗು ಅಳಿವಿನಂಚಿನಲ್ಲಿರುವ ಪ್ರಾಣಿ. ಈ ಭವ್ಯ ಜೀವಿ ಪ್ರಪಂಚದ ಆಯ್ದ ಪ್ರದೇಶಗಳಲ್ಲಿ ಮಾತ್ರ ಇವೆ ಅನ್ನೋದೇ ಅಚ್ಚರಿಯ ವಿಚಾರ.

ಅತೀ ಸುಂದರ ಹಾಗೂ ಭವ್ಯ ಜೀವಿ ಹುಲಿಯು ಸುಮಾರು ಕಡೆ ಇಲ್ಲವೇ ಇಲ್ಲ. ಭಾರತದಲ್ಲಿ ಅತೀಹೆಚ್ಚು ಹುಲಿಗಳಿದ್ದು, ದೇಶಕ್ಕೆ ಇದೊಂದು ಹೆಮ್ಮೆಯ ವಿಷಯ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ಭಾರತದಲ್ಲಿ ರಣಥಂಬೋರ್‌ ಹಾಗು ಬಾಂಧವಗಢದಂತಹ ಸ್ಥಳಗಳು ಹುಲಿಗಳ ನೆಲೆಗೆ ಹೆಸರುವಾಸಿಯಾಗಿವೆ. ಭಾರತ ಹೊರತುಪಡಿಸಿದರೆ ರಷ್ಯಾದಲ್ಲಿ ಅಮುರ್‌ ಹುಲಿಗಳು, ಇಂಡೋನೇಷ್ಯಾ ಸುಮಾತ್ರಾನ್‌ ಹುಲಿಗಳಿಗೆ ನೆಲೆಯಾಗಿದೆ. ನೇಪಾಳವು ಕೂಡ ಚಿತ್ವಾನ್‌ ಮತ್ತು ಬಾರ್ಡಿಯಾ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳನ್ನು ರಕ್ಷಿಸುತ್ತಿದೆ. ಇದಲ್ಲದೇ ಮಲೇಷ್ಯಾದ ಮಲಯನ್‌ ಹುಲಿಗಳು ಮಲಯ ಪರ್ಯಾಯ ದ್ವೀಪದಲ್ಲಿ ಸಂಚರಿಸುತ್ತವೆ. ಬಾಂಗ್ಲಾದೇಶವು ತನ್ನ ಮ್ಯಾಂಗ್ರೋವ್‌ ಕಾಡುಗಳಲ್ಲಿ ರಾಯಲ್‌ ಬೆಂಗಾಲ್‌ ಹುಲಿಗಳಿಗೆ ಆತಿಥ್ಯ ವಹಿಸುತ್ತದೆ.

ಇನ್ನೂ ಭಾರತದಲ್ಲಿ 2022ರ ಹುಲಿಗಣತಿಯಂತೆ 3167 ಹುಲಿಗಳನ್ನು ಹೊಂದಿರುವ ಮೂಲಕ ಈ ಚಾರ್ಟ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಹುಲಿಗಳನ್ನು ಸಂರಕ್ಷಣೆ ಮಾಡುವ ಪ್ರಯತ್ನದಲ್ಲಿ ಭಾರತವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ಕಾಡು ಹುಲಿಗಳಿಗೆ ಭಾರತವು ಜಾಗತಿಕ ನೆಲೆಯಾಗಿದೆ.

ಇದಲ್ಲದೇ ಬೇರೆ ದೇಶಗಳಲ್ಲಿ ಅಂದರೆ ರಷ್ಯಾದಲ್ಲಿ 371, ಇಂಡೋನೇಷ್ಯಾದಲ್ಲಿ 371, ನೇಪಾಳದಲ್ಲಿ 355, ಮಲೇಷ್ಯಾದಲ್ಲಿ 120, ಬಾಂಗ್ಲಾದೇಶದಲ್ಲಿ 106, ಥೈಲ್ಯಾಂಡ್‌ನಲ್ಲಿ 149 ಹುಲಿಗಳಿಗೆ ಎಂದು ಅಂದಾಜಿಸಲಾಗಿದೆ.

ಈ ಎಲ್ಲಾ ದೇಶಗಳಿಗಿಂತ ನಮ್ಮ ಭಾರತದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿದ್ದು, ತನ್ನ ವಿಸ್ತಾರವಾದ ರಾಷ್ಟ್ರೀಯ ಉದ್ಯಾನವನಗಳಾದ ರಣಥಂಬೋರ್‌, ಜಿಮ್‌ ಕಾರ್ಬೆಟ್‌ ಮತ್ತು ಬಾಂಧವ್‌ಗಢ್‌ಗಳಲ್ಲಿ ಅನೇಕ ಸಂಖ್ಯೆಯಲ್ಲಿ ಹುಲಿಗಳನ್ನು ಕಾಣಬಹುದಾಗಿದೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Share
Published by
ಕೆಂಡಗಣ್ಣಸ್ವಾಮಿ

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

11 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

12 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

12 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

12 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

12 hours ago