ಅಂತಾರಾಷ್ಟ್ರೀಯ

ಭಾರತ ಸೇರಿದಂತೆ ಯಾವ ಯಾವ ದೇಶಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹುಲಿಗಳಿವೆ ಗೊತ್ತಾ.?

ನವದೆಹಲಿ: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯು ಸುಂದರ ಹಾಗು ಅಳಿವಿನಂಚಿನಲ್ಲಿರುವ ಪ್ರಾಣಿ. ಈ ಭವ್ಯ ಜೀವಿ ಪ್ರಪಂಚದ ಆಯ್ದ ಪ್ರದೇಶಗಳಲ್ಲಿ ಮಾತ್ರ ಇವೆ ಅನ್ನೋದೇ ಅಚ್ಚರಿಯ ವಿಚಾರ.

ಅತೀ ಸುಂದರ ಹಾಗೂ ಭವ್ಯ ಜೀವಿ ಹುಲಿಯು ಸುಮಾರು ಕಡೆ ಇಲ್ಲವೇ ಇಲ್ಲ. ಭಾರತದಲ್ಲಿ ಅತೀಹೆಚ್ಚು ಹುಲಿಗಳಿದ್ದು, ದೇಶಕ್ಕೆ ಇದೊಂದು ಹೆಮ್ಮೆಯ ವಿಷಯ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ಭಾರತದಲ್ಲಿ ರಣಥಂಬೋರ್‌ ಹಾಗು ಬಾಂಧವಗಢದಂತಹ ಸ್ಥಳಗಳು ಹುಲಿಗಳ ನೆಲೆಗೆ ಹೆಸರುವಾಸಿಯಾಗಿವೆ. ಭಾರತ ಹೊರತುಪಡಿಸಿದರೆ ರಷ್ಯಾದಲ್ಲಿ ಅಮುರ್‌ ಹುಲಿಗಳು, ಇಂಡೋನೇಷ್ಯಾ ಸುಮಾತ್ರಾನ್‌ ಹುಲಿಗಳಿಗೆ ನೆಲೆಯಾಗಿದೆ. ನೇಪಾಳವು ಕೂಡ ಚಿತ್ವಾನ್‌ ಮತ್ತು ಬಾರ್ಡಿಯಾ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳನ್ನು ರಕ್ಷಿಸುತ್ತಿದೆ. ಇದಲ್ಲದೇ ಮಲೇಷ್ಯಾದ ಮಲಯನ್‌ ಹುಲಿಗಳು ಮಲಯ ಪರ್ಯಾಯ ದ್ವೀಪದಲ್ಲಿ ಸಂಚರಿಸುತ್ತವೆ. ಬಾಂಗ್ಲಾದೇಶವು ತನ್ನ ಮ್ಯಾಂಗ್ರೋವ್‌ ಕಾಡುಗಳಲ್ಲಿ ರಾಯಲ್‌ ಬೆಂಗಾಲ್‌ ಹುಲಿಗಳಿಗೆ ಆತಿಥ್ಯ ವಹಿಸುತ್ತದೆ.

ಇನ್ನೂ ಭಾರತದಲ್ಲಿ 2022ರ ಹುಲಿಗಣತಿಯಂತೆ 3167 ಹುಲಿಗಳನ್ನು ಹೊಂದಿರುವ ಮೂಲಕ ಈ ಚಾರ್ಟ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಹುಲಿಗಳನ್ನು ಸಂರಕ್ಷಣೆ ಮಾಡುವ ಪ್ರಯತ್ನದಲ್ಲಿ ಭಾರತವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ಕಾಡು ಹುಲಿಗಳಿಗೆ ಭಾರತವು ಜಾಗತಿಕ ನೆಲೆಯಾಗಿದೆ.

ಇದಲ್ಲದೇ ಬೇರೆ ದೇಶಗಳಲ್ಲಿ ಅಂದರೆ ರಷ್ಯಾದಲ್ಲಿ 371, ಇಂಡೋನೇಷ್ಯಾದಲ್ಲಿ 371, ನೇಪಾಳದಲ್ಲಿ 355, ಮಲೇಷ್ಯಾದಲ್ಲಿ 120, ಬಾಂಗ್ಲಾದೇಶದಲ್ಲಿ 106, ಥೈಲ್ಯಾಂಡ್‌ನಲ್ಲಿ 149 ಹುಲಿಗಳಿಗೆ ಎಂದು ಅಂದಾಜಿಸಲಾಗಿದೆ.

ಈ ಎಲ್ಲಾ ದೇಶಗಳಿಗಿಂತ ನಮ್ಮ ಭಾರತದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿದ್ದು, ತನ್ನ ವಿಸ್ತಾರವಾದ ರಾಷ್ಟ್ರೀಯ ಉದ್ಯಾನವನಗಳಾದ ರಣಥಂಬೋರ್‌, ಜಿಮ್‌ ಕಾರ್ಬೆಟ್‌ ಮತ್ತು ಬಾಂಧವ್‌ಗಢ್‌ಗಳಲ್ಲಿ ಅನೇಕ ಸಂಖ್ಯೆಯಲ್ಲಿ ಹುಲಿಗಳನ್ನು ಕಾಣಬಹುದಾಗಿದೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Share
Published by
ಕೆಂಡಗಣ್ಣಸ್ವಾಮಿ

Recent Posts

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಶಿಕ್ಷಕಿ!

ಎಚ್‌.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…

17 mins ago

ದೇಶದಲ್ಲಿ ಸಾಕಷ್ಟು ತೈಲ ದಾಸ್ತಾನು : ವಾಣಿಜ್ಯ ಅನಿಲ ಪೂರೈಕೆಯಲ್ಲಿ ಶೇ.70%ಕ್ಕೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…

30 mins ago

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…

2 hours ago

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

3 hours ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

5 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

6 hours ago