ಅಂತಾರಾಷ್ಟ್ರೀಯ

ಭಾರತ ಸೇರಿದಂತೆ ಯಾವ ಯಾವ ದೇಶಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹುಲಿಗಳಿವೆ ಗೊತ್ತಾ.?

ನವದೆಹಲಿ: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯು ಸುಂದರ ಹಾಗು ಅಳಿವಿನಂಚಿನಲ್ಲಿರುವ ಪ್ರಾಣಿ. ಈ ಭವ್ಯ ಜೀವಿ ಪ್ರಪಂಚದ ಆಯ್ದ ಪ್ರದೇಶಗಳಲ್ಲಿ ಮಾತ್ರ ಇವೆ ಅನ್ನೋದೇ ಅಚ್ಚರಿಯ ವಿಚಾರ.

ಅತೀ ಸುಂದರ ಹಾಗೂ ಭವ್ಯ ಜೀವಿ ಹುಲಿಯು ಸುಮಾರು ಕಡೆ ಇಲ್ಲವೇ ಇಲ್ಲ. ಭಾರತದಲ್ಲಿ ಅತೀಹೆಚ್ಚು ಹುಲಿಗಳಿದ್ದು, ದೇಶಕ್ಕೆ ಇದೊಂದು ಹೆಮ್ಮೆಯ ವಿಷಯ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ಭಾರತದಲ್ಲಿ ರಣಥಂಬೋರ್‌ ಹಾಗು ಬಾಂಧವಗಢದಂತಹ ಸ್ಥಳಗಳು ಹುಲಿಗಳ ನೆಲೆಗೆ ಹೆಸರುವಾಸಿಯಾಗಿವೆ. ಭಾರತ ಹೊರತುಪಡಿಸಿದರೆ ರಷ್ಯಾದಲ್ಲಿ ಅಮುರ್‌ ಹುಲಿಗಳು, ಇಂಡೋನೇಷ್ಯಾ ಸುಮಾತ್ರಾನ್‌ ಹುಲಿಗಳಿಗೆ ನೆಲೆಯಾಗಿದೆ. ನೇಪಾಳವು ಕೂಡ ಚಿತ್ವಾನ್‌ ಮತ್ತು ಬಾರ್ಡಿಯಾ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳನ್ನು ರಕ್ಷಿಸುತ್ತಿದೆ. ಇದಲ್ಲದೇ ಮಲೇಷ್ಯಾದ ಮಲಯನ್‌ ಹುಲಿಗಳು ಮಲಯ ಪರ್ಯಾಯ ದ್ವೀಪದಲ್ಲಿ ಸಂಚರಿಸುತ್ತವೆ. ಬಾಂಗ್ಲಾದೇಶವು ತನ್ನ ಮ್ಯಾಂಗ್ರೋವ್‌ ಕಾಡುಗಳಲ್ಲಿ ರಾಯಲ್‌ ಬೆಂಗಾಲ್‌ ಹುಲಿಗಳಿಗೆ ಆತಿಥ್ಯ ವಹಿಸುತ್ತದೆ.

ಇನ್ನೂ ಭಾರತದಲ್ಲಿ 2022ರ ಹುಲಿಗಣತಿಯಂತೆ 3167 ಹುಲಿಗಳನ್ನು ಹೊಂದಿರುವ ಮೂಲಕ ಈ ಚಾರ್ಟ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಹುಲಿಗಳನ್ನು ಸಂರಕ್ಷಣೆ ಮಾಡುವ ಪ್ರಯತ್ನದಲ್ಲಿ ಭಾರತವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ಕಾಡು ಹುಲಿಗಳಿಗೆ ಭಾರತವು ಜಾಗತಿಕ ನೆಲೆಯಾಗಿದೆ.

ಇದಲ್ಲದೇ ಬೇರೆ ದೇಶಗಳಲ್ಲಿ ಅಂದರೆ ರಷ್ಯಾದಲ್ಲಿ 371, ಇಂಡೋನೇಷ್ಯಾದಲ್ಲಿ 371, ನೇಪಾಳದಲ್ಲಿ 355, ಮಲೇಷ್ಯಾದಲ್ಲಿ 120, ಬಾಂಗ್ಲಾದೇಶದಲ್ಲಿ 106, ಥೈಲ್ಯಾಂಡ್‌ನಲ್ಲಿ 149 ಹುಲಿಗಳಿಗೆ ಎಂದು ಅಂದಾಜಿಸಲಾಗಿದೆ.

ಈ ಎಲ್ಲಾ ದೇಶಗಳಿಗಿಂತ ನಮ್ಮ ಭಾರತದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿದ್ದು, ತನ್ನ ವಿಸ್ತಾರವಾದ ರಾಷ್ಟ್ರೀಯ ಉದ್ಯಾನವನಗಳಾದ ರಣಥಂಬೋರ್‌, ಜಿಮ್‌ ಕಾರ್ಬೆಟ್‌ ಮತ್ತು ಬಾಂಧವ್‌ಗಢ್‌ಗಳಲ್ಲಿ ಅನೇಕ ಸಂಖ್ಯೆಯಲ್ಲಿ ಹುಲಿಗಳನ್ನು ಕಾಣಬಹುದಾಗಿದೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Share
Published by
ಕೆಂಡಗಣ್ಣಸ್ವಾಮಿ

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

11 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

15 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago