ಅಂತಾರಾಷ್ಟ್ರೀಯ

ಭಾರತ ಸೇರಿದಂತೆ ಯಾವ ಯಾವ ದೇಶಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹುಲಿಗಳಿವೆ ಗೊತ್ತಾ.?

ನವದೆಹಲಿ: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯು ಸುಂದರ ಹಾಗು ಅಳಿವಿನಂಚಿನಲ್ಲಿರುವ ಪ್ರಾಣಿ. ಈ ಭವ್ಯ ಜೀವಿ ಪ್ರಪಂಚದ ಆಯ್ದ ಪ್ರದೇಶಗಳಲ್ಲಿ ಮಾತ್ರ ಇವೆ ಅನ್ನೋದೇ ಅಚ್ಚರಿಯ ವಿಚಾರ.

ಅತೀ ಸುಂದರ ಹಾಗೂ ಭವ್ಯ ಜೀವಿ ಹುಲಿಯು ಸುಮಾರು ಕಡೆ ಇಲ್ಲವೇ ಇಲ್ಲ. ಭಾರತದಲ್ಲಿ ಅತೀಹೆಚ್ಚು ಹುಲಿಗಳಿದ್ದು, ದೇಶಕ್ಕೆ ಇದೊಂದು ಹೆಮ್ಮೆಯ ವಿಷಯ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ಭಾರತದಲ್ಲಿ ರಣಥಂಬೋರ್‌ ಹಾಗು ಬಾಂಧವಗಢದಂತಹ ಸ್ಥಳಗಳು ಹುಲಿಗಳ ನೆಲೆಗೆ ಹೆಸರುವಾಸಿಯಾಗಿವೆ. ಭಾರತ ಹೊರತುಪಡಿಸಿದರೆ ರಷ್ಯಾದಲ್ಲಿ ಅಮುರ್‌ ಹುಲಿಗಳು, ಇಂಡೋನೇಷ್ಯಾ ಸುಮಾತ್ರಾನ್‌ ಹುಲಿಗಳಿಗೆ ನೆಲೆಯಾಗಿದೆ. ನೇಪಾಳವು ಕೂಡ ಚಿತ್ವಾನ್‌ ಮತ್ತು ಬಾರ್ಡಿಯಾ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳನ್ನು ರಕ್ಷಿಸುತ್ತಿದೆ. ಇದಲ್ಲದೇ ಮಲೇಷ್ಯಾದ ಮಲಯನ್‌ ಹುಲಿಗಳು ಮಲಯ ಪರ್ಯಾಯ ದ್ವೀಪದಲ್ಲಿ ಸಂಚರಿಸುತ್ತವೆ. ಬಾಂಗ್ಲಾದೇಶವು ತನ್ನ ಮ್ಯಾಂಗ್ರೋವ್‌ ಕಾಡುಗಳಲ್ಲಿ ರಾಯಲ್‌ ಬೆಂಗಾಲ್‌ ಹುಲಿಗಳಿಗೆ ಆತಿಥ್ಯ ವಹಿಸುತ್ತದೆ.

ಇನ್ನೂ ಭಾರತದಲ್ಲಿ 2022ರ ಹುಲಿಗಣತಿಯಂತೆ 3167 ಹುಲಿಗಳನ್ನು ಹೊಂದಿರುವ ಮೂಲಕ ಈ ಚಾರ್ಟ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಹುಲಿಗಳನ್ನು ಸಂರಕ್ಷಣೆ ಮಾಡುವ ಪ್ರಯತ್ನದಲ್ಲಿ ಭಾರತವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ಕಾಡು ಹುಲಿಗಳಿಗೆ ಭಾರತವು ಜಾಗತಿಕ ನೆಲೆಯಾಗಿದೆ.

ಇದಲ್ಲದೇ ಬೇರೆ ದೇಶಗಳಲ್ಲಿ ಅಂದರೆ ರಷ್ಯಾದಲ್ಲಿ 371, ಇಂಡೋನೇಷ್ಯಾದಲ್ಲಿ 371, ನೇಪಾಳದಲ್ಲಿ 355, ಮಲೇಷ್ಯಾದಲ್ಲಿ 120, ಬಾಂಗ್ಲಾದೇಶದಲ್ಲಿ 106, ಥೈಲ್ಯಾಂಡ್‌ನಲ್ಲಿ 149 ಹುಲಿಗಳಿಗೆ ಎಂದು ಅಂದಾಜಿಸಲಾಗಿದೆ.

ಈ ಎಲ್ಲಾ ದೇಶಗಳಿಗಿಂತ ನಮ್ಮ ಭಾರತದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿದ್ದು, ತನ್ನ ವಿಸ್ತಾರವಾದ ರಾಷ್ಟ್ರೀಯ ಉದ್ಯಾನವನಗಳಾದ ರಣಥಂಬೋರ್‌, ಜಿಮ್‌ ಕಾರ್ಬೆಟ್‌ ಮತ್ತು ಬಾಂಧವ್‌ಗಢ್‌ಗಳಲ್ಲಿ ಅನೇಕ ಸಂಖ್ಯೆಯಲ್ಲಿ ಹುಲಿಗಳನ್ನು ಕಾಣಬಹುದಾಗಿದೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Share
Published by
ಕೆಂಡಗಣ್ಣಸ್ವಾಮಿ

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago