ಅಂತಾರಾಷ್ಟ್ರೀಯ

ಭಾರತ ಸೇರಿದಂತೆ ಯಾವ ಯಾವ ದೇಶಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಹುಲಿಗಳಿವೆ ಗೊತ್ತಾ.?

ನವದೆಹಲಿ: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯು ಸುಂದರ ಹಾಗು ಅಳಿವಿನಂಚಿನಲ್ಲಿರುವ ಪ್ರಾಣಿ. ಈ ಭವ್ಯ ಜೀವಿ ಪ್ರಪಂಚದ ಆಯ್ದ ಪ್ರದೇಶಗಳಲ್ಲಿ ಮಾತ್ರ ಇವೆ ಅನ್ನೋದೇ ಅಚ್ಚರಿಯ ವಿಚಾರ.

ಅತೀ ಸುಂದರ ಹಾಗೂ ಭವ್ಯ ಜೀವಿ ಹುಲಿಯು ಸುಮಾರು ಕಡೆ ಇಲ್ಲವೇ ಇಲ್ಲ. ಭಾರತದಲ್ಲಿ ಅತೀಹೆಚ್ಚು ಹುಲಿಗಳಿದ್ದು, ದೇಶಕ್ಕೆ ಇದೊಂದು ಹೆಮ್ಮೆಯ ವಿಷಯ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ಭಾರತದಲ್ಲಿ ರಣಥಂಬೋರ್‌ ಹಾಗು ಬಾಂಧವಗಢದಂತಹ ಸ್ಥಳಗಳು ಹುಲಿಗಳ ನೆಲೆಗೆ ಹೆಸರುವಾಸಿಯಾಗಿವೆ. ಭಾರತ ಹೊರತುಪಡಿಸಿದರೆ ರಷ್ಯಾದಲ್ಲಿ ಅಮುರ್‌ ಹುಲಿಗಳು, ಇಂಡೋನೇಷ್ಯಾ ಸುಮಾತ್ರಾನ್‌ ಹುಲಿಗಳಿಗೆ ನೆಲೆಯಾಗಿದೆ. ನೇಪಾಳವು ಕೂಡ ಚಿತ್ವಾನ್‌ ಮತ್ತು ಬಾರ್ಡಿಯಾ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳನ್ನು ರಕ್ಷಿಸುತ್ತಿದೆ. ಇದಲ್ಲದೇ ಮಲೇಷ್ಯಾದ ಮಲಯನ್‌ ಹುಲಿಗಳು ಮಲಯ ಪರ್ಯಾಯ ದ್ವೀಪದಲ್ಲಿ ಸಂಚರಿಸುತ್ತವೆ. ಬಾಂಗ್ಲಾದೇಶವು ತನ್ನ ಮ್ಯಾಂಗ್ರೋವ್‌ ಕಾಡುಗಳಲ್ಲಿ ರಾಯಲ್‌ ಬೆಂಗಾಲ್‌ ಹುಲಿಗಳಿಗೆ ಆತಿಥ್ಯ ವಹಿಸುತ್ತದೆ.

ಇನ್ನೂ ಭಾರತದಲ್ಲಿ 2022ರ ಹುಲಿಗಣತಿಯಂತೆ 3167 ಹುಲಿಗಳನ್ನು ಹೊಂದಿರುವ ಮೂಲಕ ಈ ಚಾರ್ಟ್‌ನಲ್ಲಿ ಅಗ್ರಸ್ಥಾನದಲ್ಲಿದೆ. ಹುಲಿಗಳನ್ನು ಸಂರಕ್ಷಣೆ ಮಾಡುವ ಪ್ರಯತ್ನದಲ್ಲಿ ಭಾರತವು ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ಕಾಡು ಹುಲಿಗಳಿಗೆ ಭಾರತವು ಜಾಗತಿಕ ನೆಲೆಯಾಗಿದೆ.

ಇದಲ್ಲದೇ ಬೇರೆ ದೇಶಗಳಲ್ಲಿ ಅಂದರೆ ರಷ್ಯಾದಲ್ಲಿ 371, ಇಂಡೋನೇಷ್ಯಾದಲ್ಲಿ 371, ನೇಪಾಳದಲ್ಲಿ 355, ಮಲೇಷ್ಯಾದಲ್ಲಿ 120, ಬಾಂಗ್ಲಾದೇಶದಲ್ಲಿ 106, ಥೈಲ್ಯಾಂಡ್‌ನಲ್ಲಿ 149 ಹುಲಿಗಳಿಗೆ ಎಂದು ಅಂದಾಜಿಸಲಾಗಿದೆ.

ಈ ಎಲ್ಲಾ ದೇಶಗಳಿಗಿಂತ ನಮ್ಮ ಭಾರತದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿದ್ದು, ತನ್ನ ವಿಸ್ತಾರವಾದ ರಾಷ್ಟ್ರೀಯ ಉದ್ಯಾನವನಗಳಾದ ರಣಥಂಬೋರ್‌, ಜಿಮ್‌ ಕಾರ್ಬೆಟ್‌ ಮತ್ತು ಬಾಂಧವ್‌ಗಢ್‌ಗಳಲ್ಲಿ ಅನೇಕ ಸಂಖ್ಯೆಯಲ್ಲಿ ಹುಲಿಗಳನ್ನು ಕಾಣಬಹುದಾಗಿದೆ.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Share
Published by
ಕೆಂಡಗಣ್ಣಸ್ವಾಮಿ

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

8 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

9 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

10 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

10 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

10 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

12 hours ago