ಅಂತಾರಾಷ್ಟ್ರೀಯ

ವಿಸಾ ಇಲ್ಲದೇ ಭಾರತೀಯರಿಗೆ ಪ್ರವೇಶ ಘೋಷಿಸಿದ ಮಲೇಷಿಯಾ; ಏನಿದರ ಹಿಂದಿನ ಉದ್ದೇಶ?

ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಕೈಗೊಳ್ಳಬೇಕೆಂದರೆ ವಿಸಾ ಹೊಂದಿರಬೇಕಾದದ್ದು ಕಡ್ಡಾಯ ನಿಯಮ. ಆದರೆ ಕೆಲ ದೇಶಗಳು ಇತರೆ ದೇಶಗಳಿಗೆ ವಿಸಾ ರಹಿತ ಪ್ರವೇಶವನ್ನು ನೀಡುವುದರ ಮೂಲಕ ಕೆಲ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಕೆಲಸಕ್ಕೆ ಆಗಾಗ ಕೈ ಹಾಕುತ್ತಾ ಇರುತ್ತವೆ. ಕೆಲ ದಿನಗಳ ಹಿಂದೆ ಥೈಲ್ಯಾಂಡ್‌ ಭಾರತೀಯರು ನಮ್ಮ ದೇಶಕ್ಕೆ ವಿಸಾ ಇಲ್ಲದೇ ಪ್ರಯಾಣ ಕೈಗೊಳ್ಳಬಹುದು ಎಂದು ಘೋಷಣೆ ಮಾಡಿದ್ದ ಬೆನ್ನಲ್ಲೇ ಇದೀಗ ಮಲೇಷಿಯಾ ಸಹ ಅದೇ ಹಾದಿಯನ್ನು ತುಳಿದಿದೆ.

ಹೌದು, ಭಾರತ ಹಾಗೂ ಚೀನಾ ದೇಶದ ಪ್ರಜೆಗಳು ಡಿಸೆಂಬರ್‌ 1ರಿಂದ ಡಿಸೆಂಬರ್‌ 31ರವರೆಗೆ ಮಲೇಷಿಯಾ ದೇಶಕ್ಕೆ ಯಾವುದೇ ವಿಸಾ ಇಲ್ಲದೇ ಪ್ರಯಾಣ ಕೈಗೊಳ್ಳಬಹುದು ಎಂದು ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ ಘೋಷಿಸಿದ್ದಾರೆ.

ಹೀಗೆ ಮಲೇಷಿಯಾ ಪ್ರಧಾನಿ ಇಂತಹ ನಿರ್ಧಾರ ಕೈಗೊಂಡ ಬೆನ್ನಲ್ಲೇ ಇದರ ಹಿಂದಿನ ಉದ್ದೇಶ ಏನಿರಬಹುದು ಎಂಬ ಚರ್ಚೆಗಳು ಆರಂಭವಾಗಿವೆ. ಡಿಸೆಂಬರ್‌ ತಿಂಗಳಲ್ಲಿ ವಿದೇಶ ಪ್ರಯಾಣ ಕೈಗೊಳ್ಳುವವರ ಸಂಖ್ಯೆ ಹೆಚ್ಚಿರುತ್ತದೆ, ಅದರಲ್ಲಿಯೂ ಹೊಸ ವರ್ಷದ ಆಚರಣೆಗಾಗಿ ಡಿಸೆಂಬರ್‌ ಅಂತ್ಯದಲ್ಲಿ ಭಾರತೀಯರು ವಿದೇಶ ಪ್ರಯಾಣ ಕೈಗೊಳ್ಳುವುದು ಹೆಚ್ಚು.

ಹೀಗಾಗಿ ವಿಸಾ ರಹಿತ ಪ್ರವೇಶಕ್ಕೆ ಭಾರತೀಯರಿಗೆ ಅನುಮತಿ ನೀಡಿದರೆ ಟೂರಿಸಂಗೆ ಬೂಸ್ಟ್‌ ಸಿಗಲಿದೆ ಎಂಬ ಉದ್ದೇಶದಿಂದ ಮಲೇಷಿಯಾ ಇಂತಹ ನಿರ್ಧಾರ ಕೈಗೊಂಡಿದೆ. ಥೈಲ್ಯಾಂಡ್‌ ಸಹ ಇಂತಹದ್ದೇ ಉದ್ದೇಶದೊಂದಿಗೆ ಭಾರತೀಯರಿಗೆ ವಿಸಾ ರಹಿತ ಪ್ರವೇಶವನ್ನು ಘೋಷಿಸಿತ್ತು. ನವೆಂಬರ್‌ 10ರಿಂದ 2024ರ ಮೇ 10ರವರೆಗೆ ಭಾರತೀಯರು ನಮ್ಮ ದೇಶಕ್ಕೆ ವಿಸಾ ರಹಿತ ಪ್ರವೇಶ ಪಡೆಯಬಹುದು ಹಾಗೂ 30 ದಿನಗಳ ಕಾಲ ಉಳಿಯಬಹುದು ಎಂದು ಘೋಷಿಸಿತ್ತು.

andolana

Share
Published by
andolana
Tags: malaysia

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

10 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

10 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

10 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

10 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

10 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

11 hours ago