ಅಂತಾರಾಷ್ಟ್ರೀಯ

ವಿಸಾ ಇಲ್ಲದೇ ಭಾರತೀಯರಿಗೆ ಪ್ರವೇಶ ಘೋಷಿಸಿದ ಮಲೇಷಿಯಾ; ಏನಿದರ ಹಿಂದಿನ ಉದ್ದೇಶ?

ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಕೈಗೊಳ್ಳಬೇಕೆಂದರೆ ವಿಸಾ ಹೊಂದಿರಬೇಕಾದದ್ದು ಕಡ್ಡಾಯ ನಿಯಮ. ಆದರೆ ಕೆಲ ದೇಶಗಳು ಇತರೆ ದೇಶಗಳಿಗೆ ವಿಸಾ ರಹಿತ ಪ್ರವೇಶವನ್ನು ನೀಡುವುದರ ಮೂಲಕ ಕೆಲ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಕೆಲಸಕ್ಕೆ ಆಗಾಗ ಕೈ ಹಾಕುತ್ತಾ ಇರುತ್ತವೆ. ಕೆಲ ದಿನಗಳ ಹಿಂದೆ ಥೈಲ್ಯಾಂಡ್‌ ಭಾರತೀಯರು ನಮ್ಮ ದೇಶಕ್ಕೆ ವಿಸಾ ಇಲ್ಲದೇ ಪ್ರಯಾಣ ಕೈಗೊಳ್ಳಬಹುದು ಎಂದು ಘೋಷಣೆ ಮಾಡಿದ್ದ ಬೆನ್ನಲ್ಲೇ ಇದೀಗ ಮಲೇಷಿಯಾ ಸಹ ಅದೇ ಹಾದಿಯನ್ನು ತುಳಿದಿದೆ.

ಹೌದು, ಭಾರತ ಹಾಗೂ ಚೀನಾ ದೇಶದ ಪ್ರಜೆಗಳು ಡಿಸೆಂಬರ್‌ 1ರಿಂದ ಡಿಸೆಂಬರ್‌ 31ರವರೆಗೆ ಮಲೇಷಿಯಾ ದೇಶಕ್ಕೆ ಯಾವುದೇ ವಿಸಾ ಇಲ್ಲದೇ ಪ್ರಯಾಣ ಕೈಗೊಳ್ಳಬಹುದು ಎಂದು ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ ಘೋಷಿಸಿದ್ದಾರೆ.

ಹೀಗೆ ಮಲೇಷಿಯಾ ಪ್ರಧಾನಿ ಇಂತಹ ನಿರ್ಧಾರ ಕೈಗೊಂಡ ಬೆನ್ನಲ್ಲೇ ಇದರ ಹಿಂದಿನ ಉದ್ದೇಶ ಏನಿರಬಹುದು ಎಂಬ ಚರ್ಚೆಗಳು ಆರಂಭವಾಗಿವೆ. ಡಿಸೆಂಬರ್‌ ತಿಂಗಳಲ್ಲಿ ವಿದೇಶ ಪ್ರಯಾಣ ಕೈಗೊಳ್ಳುವವರ ಸಂಖ್ಯೆ ಹೆಚ್ಚಿರುತ್ತದೆ, ಅದರಲ್ಲಿಯೂ ಹೊಸ ವರ್ಷದ ಆಚರಣೆಗಾಗಿ ಡಿಸೆಂಬರ್‌ ಅಂತ್ಯದಲ್ಲಿ ಭಾರತೀಯರು ವಿದೇಶ ಪ್ರಯಾಣ ಕೈಗೊಳ್ಳುವುದು ಹೆಚ್ಚು.

ಹೀಗಾಗಿ ವಿಸಾ ರಹಿತ ಪ್ರವೇಶಕ್ಕೆ ಭಾರತೀಯರಿಗೆ ಅನುಮತಿ ನೀಡಿದರೆ ಟೂರಿಸಂಗೆ ಬೂಸ್ಟ್‌ ಸಿಗಲಿದೆ ಎಂಬ ಉದ್ದೇಶದಿಂದ ಮಲೇಷಿಯಾ ಇಂತಹ ನಿರ್ಧಾರ ಕೈಗೊಂಡಿದೆ. ಥೈಲ್ಯಾಂಡ್‌ ಸಹ ಇಂತಹದ್ದೇ ಉದ್ದೇಶದೊಂದಿಗೆ ಭಾರತೀಯರಿಗೆ ವಿಸಾ ರಹಿತ ಪ್ರವೇಶವನ್ನು ಘೋಷಿಸಿತ್ತು. ನವೆಂಬರ್‌ 10ರಿಂದ 2024ರ ಮೇ 10ರವರೆಗೆ ಭಾರತೀಯರು ನಮ್ಮ ದೇಶಕ್ಕೆ ವಿಸಾ ರಹಿತ ಪ್ರವೇಶ ಪಡೆಯಬಹುದು ಹಾಗೂ 30 ದಿನಗಳ ಕಾಲ ಉಳಿಯಬಹುದು ಎಂದು ಘೋಷಿಸಿತ್ತು.

andolana

Share
Published by
andolana
Tags: malaysia

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

6 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

7 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

7 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

7 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

7 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

8 hours ago