ಅಂತಾರಾಷ್ಟ್ರೀಯ

ವಿಸಾ ಇಲ್ಲದೇ ಭಾರತೀಯರಿಗೆ ಪ್ರವೇಶ ಘೋಷಿಸಿದ ಮಲೇಷಿಯಾ; ಏನಿದರ ಹಿಂದಿನ ಉದ್ದೇಶ?

ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಕೈಗೊಳ್ಳಬೇಕೆಂದರೆ ವಿಸಾ ಹೊಂದಿರಬೇಕಾದದ್ದು ಕಡ್ಡಾಯ ನಿಯಮ. ಆದರೆ ಕೆಲ ದೇಶಗಳು ಇತರೆ ದೇಶಗಳಿಗೆ ವಿಸಾ ರಹಿತ ಪ್ರವೇಶವನ್ನು ನೀಡುವುದರ ಮೂಲಕ ಕೆಲ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಕೆಲಸಕ್ಕೆ ಆಗಾಗ ಕೈ ಹಾಕುತ್ತಾ ಇರುತ್ತವೆ. ಕೆಲ ದಿನಗಳ ಹಿಂದೆ ಥೈಲ್ಯಾಂಡ್‌ ಭಾರತೀಯರು ನಮ್ಮ ದೇಶಕ್ಕೆ ವಿಸಾ ಇಲ್ಲದೇ ಪ್ರಯಾಣ ಕೈಗೊಳ್ಳಬಹುದು ಎಂದು ಘೋಷಣೆ ಮಾಡಿದ್ದ ಬೆನ್ನಲ್ಲೇ ಇದೀಗ ಮಲೇಷಿಯಾ ಸಹ ಅದೇ ಹಾದಿಯನ್ನು ತುಳಿದಿದೆ.

ಹೌದು, ಭಾರತ ಹಾಗೂ ಚೀನಾ ದೇಶದ ಪ್ರಜೆಗಳು ಡಿಸೆಂಬರ್‌ 1ರಿಂದ ಡಿಸೆಂಬರ್‌ 31ರವರೆಗೆ ಮಲೇಷಿಯಾ ದೇಶಕ್ಕೆ ಯಾವುದೇ ವಿಸಾ ಇಲ್ಲದೇ ಪ್ರಯಾಣ ಕೈಗೊಳ್ಳಬಹುದು ಎಂದು ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ ಘೋಷಿಸಿದ್ದಾರೆ.

ಹೀಗೆ ಮಲೇಷಿಯಾ ಪ್ರಧಾನಿ ಇಂತಹ ನಿರ್ಧಾರ ಕೈಗೊಂಡ ಬೆನ್ನಲ್ಲೇ ಇದರ ಹಿಂದಿನ ಉದ್ದೇಶ ಏನಿರಬಹುದು ಎಂಬ ಚರ್ಚೆಗಳು ಆರಂಭವಾಗಿವೆ. ಡಿಸೆಂಬರ್‌ ತಿಂಗಳಲ್ಲಿ ವಿದೇಶ ಪ್ರಯಾಣ ಕೈಗೊಳ್ಳುವವರ ಸಂಖ್ಯೆ ಹೆಚ್ಚಿರುತ್ತದೆ, ಅದರಲ್ಲಿಯೂ ಹೊಸ ವರ್ಷದ ಆಚರಣೆಗಾಗಿ ಡಿಸೆಂಬರ್‌ ಅಂತ್ಯದಲ್ಲಿ ಭಾರತೀಯರು ವಿದೇಶ ಪ್ರಯಾಣ ಕೈಗೊಳ್ಳುವುದು ಹೆಚ್ಚು.

ಹೀಗಾಗಿ ವಿಸಾ ರಹಿತ ಪ್ರವೇಶಕ್ಕೆ ಭಾರತೀಯರಿಗೆ ಅನುಮತಿ ನೀಡಿದರೆ ಟೂರಿಸಂಗೆ ಬೂಸ್ಟ್‌ ಸಿಗಲಿದೆ ಎಂಬ ಉದ್ದೇಶದಿಂದ ಮಲೇಷಿಯಾ ಇಂತಹ ನಿರ್ಧಾರ ಕೈಗೊಂಡಿದೆ. ಥೈಲ್ಯಾಂಡ್‌ ಸಹ ಇಂತಹದ್ದೇ ಉದ್ದೇಶದೊಂದಿಗೆ ಭಾರತೀಯರಿಗೆ ವಿಸಾ ರಹಿತ ಪ್ರವೇಶವನ್ನು ಘೋಷಿಸಿತ್ತು. ನವೆಂಬರ್‌ 10ರಿಂದ 2024ರ ಮೇ 10ರವರೆಗೆ ಭಾರತೀಯರು ನಮ್ಮ ದೇಶಕ್ಕೆ ವಿಸಾ ರಹಿತ ಪ್ರವೇಶ ಪಡೆಯಬಹುದು ಹಾಗೂ 30 ದಿನಗಳ ಕಾಲ ಉಳಿಯಬಹುದು ಎಂದು ಘೋಷಿಸಿತ್ತು.

andolana

Share
Published by
andolana
Tags: malaysia

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

3 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

4 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

4 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

5 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

6 hours ago