ಅಂತಾರಾಷ್ಟ್ರೀಯ

ವಿಸಾ ಇಲ್ಲದೇ ಭಾರತೀಯರಿಗೆ ಪ್ರವೇಶ ಘೋಷಿಸಿದ ಮಲೇಷಿಯಾ; ಏನಿದರ ಹಿಂದಿನ ಉದ್ದೇಶ?

ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಕೈಗೊಳ್ಳಬೇಕೆಂದರೆ ವಿಸಾ ಹೊಂದಿರಬೇಕಾದದ್ದು ಕಡ್ಡಾಯ ನಿಯಮ. ಆದರೆ ಕೆಲ ದೇಶಗಳು ಇತರೆ ದೇಶಗಳಿಗೆ ವಿಸಾ ರಹಿತ ಪ್ರವೇಶವನ್ನು ನೀಡುವುದರ ಮೂಲಕ ಕೆಲ ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಕೆಲಸಕ್ಕೆ ಆಗಾಗ ಕೈ ಹಾಕುತ್ತಾ ಇರುತ್ತವೆ. ಕೆಲ ದಿನಗಳ ಹಿಂದೆ ಥೈಲ್ಯಾಂಡ್‌ ಭಾರತೀಯರು ನಮ್ಮ ದೇಶಕ್ಕೆ ವಿಸಾ ಇಲ್ಲದೇ ಪ್ರಯಾಣ ಕೈಗೊಳ್ಳಬಹುದು ಎಂದು ಘೋಷಣೆ ಮಾಡಿದ್ದ ಬೆನ್ನಲ್ಲೇ ಇದೀಗ ಮಲೇಷಿಯಾ ಸಹ ಅದೇ ಹಾದಿಯನ್ನು ತುಳಿದಿದೆ.

ಹೌದು, ಭಾರತ ಹಾಗೂ ಚೀನಾ ದೇಶದ ಪ್ರಜೆಗಳು ಡಿಸೆಂಬರ್‌ 1ರಿಂದ ಡಿಸೆಂಬರ್‌ 31ರವರೆಗೆ ಮಲೇಷಿಯಾ ದೇಶಕ್ಕೆ ಯಾವುದೇ ವಿಸಾ ಇಲ್ಲದೇ ಪ್ರಯಾಣ ಕೈಗೊಳ್ಳಬಹುದು ಎಂದು ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ ಘೋಷಿಸಿದ್ದಾರೆ.

ಹೀಗೆ ಮಲೇಷಿಯಾ ಪ್ರಧಾನಿ ಇಂತಹ ನಿರ್ಧಾರ ಕೈಗೊಂಡ ಬೆನ್ನಲ್ಲೇ ಇದರ ಹಿಂದಿನ ಉದ್ದೇಶ ಏನಿರಬಹುದು ಎಂಬ ಚರ್ಚೆಗಳು ಆರಂಭವಾಗಿವೆ. ಡಿಸೆಂಬರ್‌ ತಿಂಗಳಲ್ಲಿ ವಿದೇಶ ಪ್ರಯಾಣ ಕೈಗೊಳ್ಳುವವರ ಸಂಖ್ಯೆ ಹೆಚ್ಚಿರುತ್ತದೆ, ಅದರಲ್ಲಿಯೂ ಹೊಸ ವರ್ಷದ ಆಚರಣೆಗಾಗಿ ಡಿಸೆಂಬರ್‌ ಅಂತ್ಯದಲ್ಲಿ ಭಾರತೀಯರು ವಿದೇಶ ಪ್ರಯಾಣ ಕೈಗೊಳ್ಳುವುದು ಹೆಚ್ಚು.

ಹೀಗಾಗಿ ವಿಸಾ ರಹಿತ ಪ್ರವೇಶಕ್ಕೆ ಭಾರತೀಯರಿಗೆ ಅನುಮತಿ ನೀಡಿದರೆ ಟೂರಿಸಂಗೆ ಬೂಸ್ಟ್‌ ಸಿಗಲಿದೆ ಎಂಬ ಉದ್ದೇಶದಿಂದ ಮಲೇಷಿಯಾ ಇಂತಹ ನಿರ್ಧಾರ ಕೈಗೊಂಡಿದೆ. ಥೈಲ್ಯಾಂಡ್‌ ಸಹ ಇಂತಹದ್ದೇ ಉದ್ದೇಶದೊಂದಿಗೆ ಭಾರತೀಯರಿಗೆ ವಿಸಾ ರಹಿತ ಪ್ರವೇಶವನ್ನು ಘೋಷಿಸಿತ್ತು. ನವೆಂಬರ್‌ 10ರಿಂದ 2024ರ ಮೇ 10ರವರೆಗೆ ಭಾರತೀಯರು ನಮ್ಮ ದೇಶಕ್ಕೆ ವಿಸಾ ರಹಿತ ಪ್ರವೇಶ ಪಡೆಯಬಹುದು ಹಾಗೂ 30 ದಿನಗಳ ಕಾಲ ಉಳಿಯಬಹುದು ಎಂದು ಘೋಷಿಸಿತ್ತು.

andolana

Share
Published by
andolana
Tags: malaysia

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

5 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

7 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

7 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

7 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

9 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

10 hours ago