ಕೀವ್ : ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 49 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ರಷ್ಯಾದ ಗಡಿಯಲ್ಲಿರುವ ಯುದ್ಧ-ಪೀಡಿತ ಪ್ರದೇಶದ ಕುಪಿಯಾನ್ಸ್ಕ್ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೇಳಿದ್ದಾರೆ.
“ಒಂದು ಸಾಮಾನ್ಯ ಕಿರಾಣಿ ಅಂಗಡಿ ಮೇಲೆ ರಾಕೆಟ್ ದಾಳಿ ಮಾಡಿದ ರಷ್ಯಾದ ಈ ಕ್ರೂರ ಕೃತ್ಯ ಸಂಪೂರ್ಣವಾಗಿ ಉದ್ದೇಶಪೂರ್ವಕ ಭಯೋತ್ಪಾದಕ ದಾಳಿಯಾಗಿದೆ” ಎಂದು ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.
ರಷ್ಯಾ ದಾಳಿಯಲ್ಲಿ ಕನಿಷ್ಠ 49 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ಪ್ರಾಸಿಕ್ಯೂಟರ್ ಜನರಲ್ ಹೇಳಿದ್ದಾರೆ.
ಇಂದು ಮಧ್ಯಾಹ್ನ 1:15 (1015 GMT)ರ ಸುಮಾರಿಗೆ ಗ್ರೋಜಾ ಗ್ರಾಮದಲ್ಲಿರುವ ಕೆಫೆ ಮತ್ತು ಅಂಗಡಿ ಮೇಲೆ ದಾಳಿ ನಡೆಸಲಾಗಿದೆ ಎಂದು ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ಅವರು ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…