ಅಂತಾರಾಷ್ಟ್ರೀಯ

ಪೂರ್ವ ಉಕ್ರೇನ್‌ ಮೇಲೆ ರಷ್ಯಾದಿಂದ ಕ್ಷಿಪಣಿ ದಾಳಿ: ಕನಿಷ್ಠ 49 ಮಂದಿ ಸಾವು

ಕೀವ್ : ರಷ್ಯಾ ಮತ್ತೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಖಾರ್ಕಿವ್‌ನ ಪೂರ್ವ ಪ್ರದೇಶದಲ್ಲಿ ಕಿರಾಣಿ ಅಂಗಡಿ ಮತ್ತು ಕೆಫೆಯ ಮೇಲೆ ಮಾಸ್ಕೋ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 49 ಮಂದಿ ಮೃತಪಟ್ಟಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ರಷ್ಯಾದ ಗಡಿಯಲ್ಲಿರುವ ಯುದ್ಧ-ಪೀಡಿತ ಪ್ರದೇಶದ ಕುಪಿಯಾನ್ಸ್ಕ್ ಜಿಲ್ಲೆಯಲ್ಲಿ ಈ ದಾಳಿ ನಡೆದಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೇಳಿದ್ದಾರೆ.

“ಒಂದು ಸಾಮಾನ್ಯ ಕಿರಾಣಿ ಅಂಗಡಿ ಮೇಲೆ ರಾಕೆಟ್‌ ದಾಳಿ ಮಾಡಿದ ರಷ್ಯಾದ ಈ ಕ್ರೂರ ಕೃತ್ಯ ಸಂಪೂರ್ಣವಾಗಿ ಉದ್ದೇಶಪೂರ್ವಕ ಭಯೋತ್ಪಾದಕ ದಾಳಿಯಾಗಿದೆ” ಎಂದು ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ರಷ್ಯಾ ದಾಳಿಯಲ್ಲಿ ಕನಿಷ್ಠ 49 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ಪ್ರಾಸಿಕ್ಯೂಟರ್ ಜನರಲ್ ಹೇಳಿದ್ದಾರೆ.

ಇಂದು ಮಧ್ಯಾಹ್ನ 1:15 (1015 GMT)ರ ಸುಮಾರಿಗೆ ಗ್ರೋಜಾ ಗ್ರಾಮದಲ್ಲಿರುವ ಕೆಫೆ ಮತ್ತು ಅಂಗಡಿ ಮೇಲೆ ದಾಳಿ ನಡೆಸಲಾಗಿದೆ ಎಂದು ಖಾರ್ಕಿವ್ ಪ್ರದೇಶದ ಮುಖ್ಯಸ್ಥ ಒಲೆಗ್ ಸಿನೆಗುಬೊವ್ ಅವರು ತಿಳಿಸಿದ್ದಾರೆ.

andolanait

Share
Published by
andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago