ಅಂತಾರಾಷ್ಟ್ರೀಯ

ಏಷ್ಯಾದ ಕುಬೇರರ ನಗರವಾಗಿ ಹೊರಹೊಮ್ಮಿದ ಮುಂಬೈ: ಕಾರಣ ಗೊತ್ತಾ?

ಮುಂಬೈ: ಭಾರತದ ವಾಣಿಜ್ಯ ನಗರಿ ಮುಂಬೈಗೆ ಮತ್ತೊಂದು ಗರಿ ಸೇರಿದ್ದು, ಮುಂಬೈ ಈಗ ಏಷ್ಯಾದ ಕುಬೇರರ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಕಡಿಮೆ ವಿಸ್ತೀರ್ಣದಲ್ಲಿ ಹೆಚ್ಚು ಶತಕೋಟ್ಯಾಧಿಪತಿಗಳನ್ನು ಹೊಂದಿದ ಮೊದಲ ನಗರ ಎಂಬ ಕೀರ್ತಿ ಮುಂಬೈ ಪಾಲಾಗಿದೆ. ಈ ಹಿಂದೆ ಇದ್ದ ಬೀಜಿಂಗ್‌ ನಗರವನ್ನು ಹಿಂದಿಕ್ಕಿ ಮುಂಬೈ ಅಗ್ರಸ್ಥಾನಕ್ಕೇರಿದೆ.

ಬೀಜಿಂಗ್ ಮಹಾನಗರ 16 ಸಾವಿರ ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಮುಂಬೈ ಕೇವಲ 603 ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಚೀನಾದಲ್ಲಿ ಒಟ್ಟು 814 ಮಂದಿ ಶತಕೋಟ್ಯಧಿಪತಿಗಳಿದ್ದರೆ, ಭಾರತದಲ್ಲಿ ಈ ಸಂಖ್ಯೆ 271. ಆದರೆ ಬೀಜಿಂಗ್ ನಗರದಲ್ಲಿ 91 ಮಂದಿ ಕುಬೇರರು ಇದ್ದರೆ, ಮುಂಬೈನಲ್ಲಿ 92 ಮಂದಿ ಇದ್ದಾರೆ. ಮುಂಬೈ ಶತಕೋಟ್ಯಧಿಪತಿಗಳ ಒಟ್ಟು ಸಂಪತ್ತು 445 ಶತಕೋಟಿ ಡಾಲರ್, ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇಕಡ 47ರಷ್ಟು ಅಧಿಕವಾಗಿದೆ.

ಹರೂನ್ ರಿಸರ್ಚ್ ಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ಶ್ರೀಮಂತರ ಪಟ್ಟಿ-2024ರಲ್ಲಿ ಈ ಅಂಕಿ ಅಂಶಗಳ ಬಗ್ಗೆ ಮಾಹಿತಿ ಇದೆ.

ಜಾಗತಿಕವಾಗಿ ನ್ಯೂಯಾರ್ಕ್ (119) ಮತ್ತು ಲಂಡನ್ (97) ಹೊರತುಪಡಿಸಿದರೆ ವಿಶ್ವದಲ್ಲೇ ಅತಿಹೆಚ್ಚು ಶ್ರೀಮಂತರನ್ನು ಹೊಂದಿದ ಮೂರನೇ ನಗರವಾಗಿ ಮುಂಬೈ ಸ್ಥಾನ ಪಡೆದುಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Share
Published by
ವಾಸು ವಿ ಹೊಂಗನೂರು
Tags: Asiamumbai

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

26 mins ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

1 hour ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

2 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

3 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

4 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

4 hours ago