ಅಂತಾರಾಷ್ಟ್ರೀಯ

ಏಷ್ಯಾದ ಕುಬೇರರ ನಗರವಾಗಿ ಹೊರಹೊಮ್ಮಿದ ಮುಂಬೈ: ಕಾರಣ ಗೊತ್ತಾ?

ಮುಂಬೈ: ಭಾರತದ ವಾಣಿಜ್ಯ ನಗರಿ ಮುಂಬೈಗೆ ಮತ್ತೊಂದು ಗರಿ ಸೇರಿದ್ದು, ಮುಂಬೈ ಈಗ ಏಷ್ಯಾದ ಕುಬೇರರ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಕಡಿಮೆ ವಿಸ್ತೀರ್ಣದಲ್ಲಿ ಹೆಚ್ಚು ಶತಕೋಟ್ಯಾಧಿಪತಿಗಳನ್ನು ಹೊಂದಿದ ಮೊದಲ ನಗರ ಎಂಬ ಕೀರ್ತಿ ಮುಂಬೈ ಪಾಲಾಗಿದೆ. ಈ ಹಿಂದೆ ಇದ್ದ ಬೀಜಿಂಗ್‌ ನಗರವನ್ನು ಹಿಂದಿಕ್ಕಿ ಮುಂಬೈ ಅಗ್ರಸ್ಥಾನಕ್ಕೇರಿದೆ.

ಬೀಜಿಂಗ್ ಮಹಾನಗರ 16 ಸಾವಿರ ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಮುಂಬೈ ಕೇವಲ 603 ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಚೀನಾದಲ್ಲಿ ಒಟ್ಟು 814 ಮಂದಿ ಶತಕೋಟ್ಯಧಿಪತಿಗಳಿದ್ದರೆ, ಭಾರತದಲ್ಲಿ ಈ ಸಂಖ್ಯೆ 271. ಆದರೆ ಬೀಜಿಂಗ್ ನಗರದಲ್ಲಿ 91 ಮಂದಿ ಕುಬೇರರು ಇದ್ದರೆ, ಮುಂಬೈನಲ್ಲಿ 92 ಮಂದಿ ಇದ್ದಾರೆ. ಮುಂಬೈ ಶತಕೋಟ್ಯಧಿಪತಿಗಳ ಒಟ್ಟು ಸಂಪತ್ತು 445 ಶತಕೋಟಿ ಡಾಲರ್, ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇಕಡ 47ರಷ್ಟು ಅಧಿಕವಾಗಿದೆ.

ಹರೂನ್ ರಿಸರ್ಚ್ ಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ಶ್ರೀಮಂತರ ಪಟ್ಟಿ-2024ರಲ್ಲಿ ಈ ಅಂಕಿ ಅಂಶಗಳ ಬಗ್ಗೆ ಮಾಹಿತಿ ಇದೆ.

ಜಾಗತಿಕವಾಗಿ ನ್ಯೂಯಾರ್ಕ್ (119) ಮತ್ತು ಲಂಡನ್ (97) ಹೊರತುಪಡಿಸಿದರೆ ವಿಶ್ವದಲ್ಲೇ ಅತಿಹೆಚ್ಚು ಶ್ರೀಮಂತರನ್ನು ಹೊಂದಿದ ಮೂರನೇ ನಗರವಾಗಿ ಮುಂಬೈ ಸ್ಥಾನ ಪಡೆದುಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Share
Published by
ವಾಸು ವಿ ಹೊಂಗನೂರು
Tags: Asiamumbai

Recent Posts

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

13 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

19 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago