ಅಂತಾರಾಷ್ಟ್ರೀಯ

ಏಷ್ಯಾದ ಕುಬೇರರ ನಗರವಾಗಿ ಹೊರಹೊಮ್ಮಿದ ಮುಂಬೈ: ಕಾರಣ ಗೊತ್ತಾ?

ಮುಂಬೈ: ಭಾರತದ ವಾಣಿಜ್ಯ ನಗರಿ ಮುಂಬೈಗೆ ಮತ್ತೊಂದು ಗರಿ ಸೇರಿದ್ದು, ಮುಂಬೈ ಈಗ ಏಷ್ಯಾದ ಕುಬೇರರ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಕಡಿಮೆ ವಿಸ್ತೀರ್ಣದಲ್ಲಿ ಹೆಚ್ಚು ಶತಕೋಟ್ಯಾಧಿಪತಿಗಳನ್ನು ಹೊಂದಿದ ಮೊದಲ ನಗರ ಎಂಬ ಕೀರ್ತಿ ಮುಂಬೈ ಪಾಲಾಗಿದೆ. ಈ ಹಿಂದೆ ಇದ್ದ ಬೀಜಿಂಗ್‌ ನಗರವನ್ನು ಹಿಂದಿಕ್ಕಿ ಮುಂಬೈ ಅಗ್ರಸ್ಥಾನಕ್ಕೇರಿದೆ.

ಬೀಜಿಂಗ್ ಮಹಾನಗರ 16 ಸಾವಿರ ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಮುಂಬೈ ಕೇವಲ 603 ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಚೀನಾದಲ್ಲಿ ಒಟ್ಟು 814 ಮಂದಿ ಶತಕೋಟ್ಯಧಿಪತಿಗಳಿದ್ದರೆ, ಭಾರತದಲ್ಲಿ ಈ ಸಂಖ್ಯೆ 271. ಆದರೆ ಬೀಜಿಂಗ್ ನಗರದಲ್ಲಿ 91 ಮಂದಿ ಕುಬೇರರು ಇದ್ದರೆ, ಮುಂಬೈನಲ್ಲಿ 92 ಮಂದಿ ಇದ್ದಾರೆ. ಮುಂಬೈ ಶತಕೋಟ್ಯಧಿಪತಿಗಳ ಒಟ್ಟು ಸಂಪತ್ತು 445 ಶತಕೋಟಿ ಡಾಲರ್, ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇಕಡ 47ರಷ್ಟು ಅಧಿಕವಾಗಿದೆ.

ಹರೂನ್ ರಿಸರ್ಚ್ ಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ಶ್ರೀಮಂತರ ಪಟ್ಟಿ-2024ರಲ್ಲಿ ಈ ಅಂಕಿ ಅಂಶಗಳ ಬಗ್ಗೆ ಮಾಹಿತಿ ಇದೆ.

ಜಾಗತಿಕವಾಗಿ ನ್ಯೂಯಾರ್ಕ್ (119) ಮತ್ತು ಲಂಡನ್ (97) ಹೊರತುಪಡಿಸಿದರೆ ವಿಶ್ವದಲ್ಲೇ ಅತಿಹೆಚ್ಚು ಶ್ರೀಮಂತರನ್ನು ಹೊಂದಿದ ಮೂರನೇ ನಗರವಾಗಿ ಮುಂಬೈ ಸ್ಥಾನ ಪಡೆದುಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Share
Published by
ವಾಸು ವಿ ಹೊಂಗನೂರು
Tags: Asiamumbai

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago