ಅಂತಾರಾಷ್ಟ್ರೀಯ

ಏಷ್ಯಾದ ಕುಬೇರರ ನಗರವಾಗಿ ಹೊರಹೊಮ್ಮಿದ ಮುಂಬೈ: ಕಾರಣ ಗೊತ್ತಾ?

ಮುಂಬೈ: ಭಾರತದ ವಾಣಿಜ್ಯ ನಗರಿ ಮುಂಬೈಗೆ ಮತ್ತೊಂದು ಗರಿ ಸೇರಿದ್ದು, ಮುಂಬೈ ಈಗ ಏಷ್ಯಾದ ಕುಬೇರರ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಕಡಿಮೆ ವಿಸ್ತೀರ್ಣದಲ್ಲಿ ಹೆಚ್ಚು ಶತಕೋಟ್ಯಾಧಿಪತಿಗಳನ್ನು ಹೊಂದಿದ ಮೊದಲ ನಗರ ಎಂಬ ಕೀರ್ತಿ ಮುಂಬೈ ಪಾಲಾಗಿದೆ. ಈ ಹಿಂದೆ ಇದ್ದ ಬೀಜಿಂಗ್‌ ನಗರವನ್ನು ಹಿಂದಿಕ್ಕಿ ಮುಂಬೈ ಅಗ್ರಸ್ಥಾನಕ್ಕೇರಿದೆ.

ಬೀಜಿಂಗ್ ಮಹಾನಗರ 16 ಸಾವಿರ ಚದರ ಕಿಲೋಮೀಟರ್ ವಿಸ್ತೀರ್ಣವನ್ನು ಹೊಂದಿದ್ದು, ಮುಂಬೈ ಕೇವಲ 603 ಚದರ ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಚೀನಾದಲ್ಲಿ ಒಟ್ಟು 814 ಮಂದಿ ಶತಕೋಟ್ಯಧಿಪತಿಗಳಿದ್ದರೆ, ಭಾರತದಲ್ಲಿ ಈ ಸಂಖ್ಯೆ 271. ಆದರೆ ಬೀಜಿಂಗ್ ನಗರದಲ್ಲಿ 91 ಮಂದಿ ಕುಬೇರರು ಇದ್ದರೆ, ಮುಂಬೈನಲ್ಲಿ 92 ಮಂದಿ ಇದ್ದಾರೆ. ಮುಂಬೈ ಶತಕೋಟ್ಯಧಿಪತಿಗಳ ಒಟ್ಟು ಸಂಪತ್ತು 445 ಶತಕೋಟಿ ಡಾಲರ್, ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇಕಡ 47ರಷ್ಟು ಅಧಿಕವಾಗಿದೆ.

ಹರೂನ್ ರಿಸರ್ಚ್ ಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ಶ್ರೀಮಂತರ ಪಟ್ಟಿ-2024ರಲ್ಲಿ ಈ ಅಂಕಿ ಅಂಶಗಳ ಬಗ್ಗೆ ಮಾಹಿತಿ ಇದೆ.

ಜಾಗತಿಕವಾಗಿ ನ್ಯೂಯಾರ್ಕ್ (119) ಮತ್ತು ಲಂಡನ್ (97) ಹೊರತುಪಡಿಸಿದರೆ ವಿಶ್ವದಲ್ಲೇ ಅತಿಹೆಚ್ಚು ಶ್ರೀಮಂತರನ್ನು ಹೊಂದಿದ ಮೂರನೇ ನಗರವಾಗಿ ಮುಂಬೈ ಸ್ಥಾನ ಪಡೆದುಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Share
Published by
ವಾಸು ವಿ ಹೊಂಗನೂರು
Tags: Asiamumbai

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago