ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ.
ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಿದರು.
“ಇಸ್ರೇಲ್ ಪಕ್ಕದಲ್ಲಿಯೇ ಭದ್ರ ಮತ್ತು ಮಾನ್ಯತೆ ಪಡೆದ ಗಡಿಗಳೊಳಗೆ ಸಾರ್ವಭೌಮ, ಸ್ವತಂತ್ರ ಫೆಲೆಸ್ತೀನ್ ದೇಶದ ರಚನೆಗೆ ನೇರ ಮಾತುಕತೆಯ ಪುನರಾರಂಭಕ್ಕೆ ಭಾರತ ಯಾವತ್ತೂ ಒತ್ತು ನೀಡಿದೆ,” ಎಂದು ಅವರು ಹೇಳಿದರಲ್ಲದೆ ಫೆಲೆಸ್ತೀನ್ ಕುರಿತಂತೆ ಭಾರತದ ನಿಲುವು ಸ್ಥಿರವಾಗಿದೆ ಹಾಗೂ ಆ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದಿದ್ದಾರೆ.
ಹಮಾಸ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಕಳೆದ ಶನಿವಾರ ಗಾಯಗೊಂಡಿದ್ದಾರೆ ಹಾಗೂ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದು.
ಇಸ್ರೇಲ್ ಮೇಲಿನ ಹಮಾಸ್ ದಾಳಿಯು ಒಂದು ಉಗ್ರ ದಾಳಿ ಎಂದು ಭಾರತ ನಂಬಿದೆ ಎಂದು ಅವರು ಹೇಳಿದರು.
ಮಾನವೀಯ ಕಾನೂನನ್ನು ಎತ್ತಿ ಹಿಡಿಯುವ ಅಗತ್ಯತೆ ಇದೆ, ಅದೇ ಸಮಯ ಅಂತರರಾಷ್ಟ್ರೀಯ ಉಗ್ರವಾದದ ವಿರುದ್ಧ ಹೋರಾಡುವ ಅಗತ್ಯವೂ ಇದೆ ಎಂದು ಅವರು ಹೇಳಿದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…