ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ.
ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಿದರು.
“ಇಸ್ರೇಲ್ ಪಕ್ಕದಲ್ಲಿಯೇ ಭದ್ರ ಮತ್ತು ಮಾನ್ಯತೆ ಪಡೆದ ಗಡಿಗಳೊಳಗೆ ಸಾರ್ವಭೌಮ, ಸ್ವತಂತ್ರ ಫೆಲೆಸ್ತೀನ್ ದೇಶದ ರಚನೆಗೆ ನೇರ ಮಾತುಕತೆಯ ಪುನರಾರಂಭಕ್ಕೆ ಭಾರತ ಯಾವತ್ತೂ ಒತ್ತು ನೀಡಿದೆ,” ಎಂದು ಅವರು ಹೇಳಿದರಲ್ಲದೆ ಫೆಲೆಸ್ತೀನ್ ಕುರಿತಂತೆ ಭಾರತದ ನಿಲುವು ಸ್ಥಿರವಾಗಿದೆ ಹಾಗೂ ಆ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದಿದ್ದಾರೆ.
ಹಮಾಸ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಕಳೆದ ಶನಿವಾರ ಗಾಯಗೊಂಡಿದ್ದಾರೆ ಹಾಗೂ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದು.
ಇಸ್ರೇಲ್ ಮೇಲಿನ ಹಮಾಸ್ ದಾಳಿಯು ಒಂದು ಉಗ್ರ ದಾಳಿ ಎಂದು ಭಾರತ ನಂಬಿದೆ ಎಂದು ಅವರು ಹೇಳಿದರು.
ಮಾನವೀಯ ಕಾನೂನನ್ನು ಎತ್ತಿ ಹಿಡಿಯುವ ಅಗತ್ಯತೆ ಇದೆ, ಅದೇ ಸಮಯ ಅಂತರರಾಷ್ಟ್ರೀಯ ಉಗ್ರವಾದದ ವಿರುದ್ಧ ಹೋರಾಡುವ ಅಗತ್ಯವೂ ಇದೆ ಎಂದು ಅವರು ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…