ಅಂತಾರಾಷ್ಟ್ರೀಯ

ಫೆಲೆಸ್ತೀನ್‌ ಕುರಿತ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ: ವಿದೇಶಾಂಗ ಸಚಿವಾಲಯದ ವಕ್ತಾರ

ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ.

ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಿದರು.

“ಇಸ್ರೇಲ್‌ ಪಕ್ಕದಲ್ಲಿಯೇ ಭದ್ರ ಮತ್ತು ಮಾನ್ಯತೆ ಪಡೆದ ಗಡಿಗಳೊಳಗೆ ಸಾರ್ವಭೌಮ, ಸ್ವತಂತ್ರ ಫೆಲೆಸ್ತೀನ್‌ ದೇಶದ ರಚನೆಗೆ ನೇರ ಮಾತುಕತೆಯ ಪುನರಾರಂಭಕ್ಕೆ ಭಾರತ ಯಾವತ್ತೂ ಒತ್ತು ನೀಡಿದೆ,” ಎಂದು ಅವರು ಹೇಳಿದರಲ್ಲದೆ ಫೆಲೆಸ್ತೀನ್‌ ಕುರಿತಂತೆ ಭಾರತದ ನಿಲುವು ಸ್ಥಿರವಾಗಿದೆ ಹಾಗೂ ಆ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದಿದ್ದಾರೆ.

ಹಮಾಸ್‌ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಕಳೆದ ಶನಿವಾರ ಗಾಯಗೊಂಡಿದ್ದಾರೆ ಹಾಗೂ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದು.

ಇಸ್ರೇಲ್‌ ಮೇಲಿನ ಹಮಾಸ್‌ ದಾಳಿಯು ಒಂದು ಉಗ್ರ ದಾಳಿ ಎಂದು ಭಾರತ ನಂಬಿದೆ ಎಂದು ಅವರು ಹೇಳಿದರು.

ಮಾನವೀಯ ಕಾನೂನನ್ನು ಎತ್ತಿ ಹಿಡಿಯುವ ಅಗತ್ಯತೆ ಇದೆ, ಅದೇ ಸಮಯ ಅಂತರರಾಷ್ಟ್ರೀಯ ಉಗ್ರವಾದದ ವಿರುದ್ಧ ಹೋರಾಡುವ ಅಗತ್ಯವೂ ಇದೆ ಎಂದು ಅವರು ಹೇಳಿದರು.

andolanait

Share
Published by
andolanait

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

8 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

13 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

13 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

18 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago