ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ.
ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಿದರು.
“ಇಸ್ರೇಲ್ ಪಕ್ಕದಲ್ಲಿಯೇ ಭದ್ರ ಮತ್ತು ಮಾನ್ಯತೆ ಪಡೆದ ಗಡಿಗಳೊಳಗೆ ಸಾರ್ವಭೌಮ, ಸ್ವತಂತ್ರ ಫೆಲೆಸ್ತೀನ್ ದೇಶದ ರಚನೆಗೆ ನೇರ ಮಾತುಕತೆಯ ಪುನರಾರಂಭಕ್ಕೆ ಭಾರತ ಯಾವತ್ತೂ ಒತ್ತು ನೀಡಿದೆ,” ಎಂದು ಅವರು ಹೇಳಿದರಲ್ಲದೆ ಫೆಲೆಸ್ತೀನ್ ಕುರಿತಂತೆ ಭಾರತದ ನಿಲುವು ಸ್ಥಿರವಾಗಿದೆ ಹಾಗೂ ಆ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದಿದ್ದಾರೆ.
ಹಮಾಸ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಕಳೆದ ಶನಿವಾರ ಗಾಯಗೊಂಡಿದ್ದಾರೆ ಹಾಗೂ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದು.
ಇಸ್ರೇಲ್ ಮೇಲಿನ ಹಮಾಸ್ ದಾಳಿಯು ಒಂದು ಉಗ್ರ ದಾಳಿ ಎಂದು ಭಾರತ ನಂಬಿದೆ ಎಂದು ಅವರು ಹೇಳಿದರು.
ಮಾನವೀಯ ಕಾನೂನನ್ನು ಎತ್ತಿ ಹಿಡಿಯುವ ಅಗತ್ಯತೆ ಇದೆ, ಅದೇ ಸಮಯ ಅಂತರರಾಷ್ಟ್ರೀಯ ಉಗ್ರವಾದದ ವಿರುದ್ಧ ಹೋರಾಡುವ ಅಗತ್ಯವೂ ಇದೆ ಎಂದು ಅವರು ಹೇಳಿದರು.
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…
ವಾಷಿಂಗ್ಟನ್: ದೂರವಾಣಿ ಸಂಭಾಷಣೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಆಕ್ರೋಶ…
ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು) ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…