ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ.
ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಿದರು.
“ಇಸ್ರೇಲ್ ಪಕ್ಕದಲ್ಲಿಯೇ ಭದ್ರ ಮತ್ತು ಮಾನ್ಯತೆ ಪಡೆದ ಗಡಿಗಳೊಳಗೆ ಸಾರ್ವಭೌಮ, ಸ್ವತಂತ್ರ ಫೆಲೆಸ್ತೀನ್ ದೇಶದ ರಚನೆಗೆ ನೇರ ಮಾತುಕತೆಯ ಪುನರಾರಂಭಕ್ಕೆ ಭಾರತ ಯಾವತ್ತೂ ಒತ್ತು ನೀಡಿದೆ,” ಎಂದು ಅವರು ಹೇಳಿದರಲ್ಲದೆ ಫೆಲೆಸ್ತೀನ್ ಕುರಿತಂತೆ ಭಾರತದ ನಿಲುವು ಸ್ಥಿರವಾಗಿದೆ ಹಾಗೂ ಆ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದಿದ್ದಾರೆ.
ಹಮಾಸ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಕಳೆದ ಶನಿವಾರ ಗಾಯಗೊಂಡಿದ್ದಾರೆ ಹಾಗೂ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದು.
ಇಸ್ರೇಲ್ ಮೇಲಿನ ಹಮಾಸ್ ದಾಳಿಯು ಒಂದು ಉಗ್ರ ದಾಳಿ ಎಂದು ಭಾರತ ನಂಬಿದೆ ಎಂದು ಅವರು ಹೇಳಿದರು.
ಮಾನವೀಯ ಕಾನೂನನ್ನು ಎತ್ತಿ ಹಿಡಿಯುವ ಅಗತ್ಯತೆ ಇದೆ, ಅದೇ ಸಮಯ ಅಂತರರಾಷ್ಟ್ರೀಯ ಉಗ್ರವಾದದ ವಿರುದ್ಧ ಹೋರಾಡುವ ಅಗತ್ಯವೂ ಇದೆ ಎಂದು ಅವರು ಹೇಳಿದರು.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…