ನವದೆಹಲಿ : ಸಾರ್ವಭೌಮ ಫೆಲೆಸ್ತೀನಿ ದೇಶವನ್ನು ರಚಿಸುವ ಅಗತ್ಯವನ್ನು ಭಾರತ ಒತ್ತಿ ಹೇಳಿದೆಯಲ್ಲದೆ ಮಾನವೀಯ ತತ್ವಗಳನ್ನು ಎತ್ತಿ ಹಿಡಿಯುವ ಬದ್ಧತೆಯಿದೆ ಎಂದು ಹೇಳಿದೆ.
ಸುದ್ದಿಗಾರರ ಜೊತೆ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಭಾರತ ಎಲ್ಲಾ ಸಂಬಂಧಿತರ ಜೊತೆ ಸಂಪರ್ಕದಲ್ಲಿದೆ ಎಂದು ಹೇಳಿದರು.
“ಇಸ್ರೇಲ್ ಪಕ್ಕದಲ್ಲಿಯೇ ಭದ್ರ ಮತ್ತು ಮಾನ್ಯತೆ ಪಡೆದ ಗಡಿಗಳೊಳಗೆ ಸಾರ್ವಭೌಮ, ಸ್ವತಂತ್ರ ಫೆಲೆಸ್ತೀನ್ ದೇಶದ ರಚನೆಗೆ ನೇರ ಮಾತುಕತೆಯ ಪುನರಾರಂಭಕ್ಕೆ ಭಾರತ ಯಾವತ್ತೂ ಒತ್ತು ನೀಡಿದೆ,” ಎಂದು ಅವರು ಹೇಳಿದರಲ್ಲದೆ ಫೆಲೆಸ್ತೀನ್ ಕುರಿತಂತೆ ಭಾರತದ ನಿಲುವು ಸ್ಥಿರವಾಗಿದೆ ಹಾಗೂ ಆ ನೀತಿಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದಿದ್ದಾರೆ.
ಹಮಾಸ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಕಳೆದ ಶನಿವಾರ ಗಾಯಗೊಂಡಿದ್ದಾರೆ ಹಾಗೂ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದು.
ಇಸ್ರೇಲ್ ಮೇಲಿನ ಹಮಾಸ್ ದಾಳಿಯು ಒಂದು ಉಗ್ರ ದಾಳಿ ಎಂದು ಭಾರತ ನಂಬಿದೆ ಎಂದು ಅವರು ಹೇಳಿದರು.
ಮಾನವೀಯ ಕಾನೂನನ್ನು ಎತ್ತಿ ಹಿಡಿಯುವ ಅಗತ್ಯತೆ ಇದೆ, ಅದೇ ಸಮಯ ಅಂತರರಾಷ್ಟ್ರೀಯ ಉಗ್ರವಾದದ ವಿರುದ್ಧ ಹೋರಾಡುವ ಅಗತ್ಯವೂ ಇದೆ ಎಂದು ಅವರು ಹೇಳಿದರು.
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…