ಮಾಸ್ಕೊ: ಅಮೆರಿಕಾದ ಜಾಗತಿಕ ವ್ಯವಸ್ಥೆ ದುರ್ಬಲಗೊಳ್ಳುತ್ತಾ ಬರುತ್ತಿದೆ. ಆದರೆ, ನಮ್ಮ ದೇಶವು ಈಗ ಹೆಚ್ಚು ಸಮಾನವಾದ ಜಾಗತಿಕ ವ್ಯವಸ್ಥೆಯನ್ನು ರಚಿಸುವಲ್ಲಿ ಮುಂಚೂಣಿಯಲ್ಲಿದೆ. ಸಾರ್ವಭೌಮ, ಬಲಿಷ್ಟ ರಷ್ಯಾ ಇಲ್ಲದೆ ಶಾಶ್ವತ, ಸ್ಥಿರ ಜಾಗತಿಕ ಸುವ್ಯವಸ್ಥೆ ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಹೇಳಿದ್ದಾರೆ.
ರಾಜ್ಯ ಉಕೇನ್ ಮೇಲೆ ಮಿಲಿಟರಿ ಕಾರ್ಯಾಚರಣೆ ಮಾಡುತ್ತಿರುವುದು ನಮ್ಮ ದೇಶವನ್ನು ನಾಶಮಾಡುವ ಪಾಶ್ಚಿಮಾತ್ಯರ ವಿರುದ್ಧದ ಸಂಘರ್ಷವಾಗಿದೆ. ರಷ್ಯಾವನ್ನು ಬಲಿಷ್ಟ, ಸ್ವತಂತ್ರ ಶಕ್ತಿಯನ್ನಾಗಿ, ನಾಗರಿಕ ದೇಶವನ್ನಾಗಿ ಉಳಿಸುವ ನಮ್ಮ ಉನ್ನತ ಐತಿಹಾಸಿಕ ಹಕ್ಕನ್ನು ರಕ್ಷಿಸುತ್ತಿದ್ದೇವೆ ಎಂದು ಪುಟಿನ್ ಹೇಳಿದ್ದಾರೆ.
ಅಮೆರಿಕ ಮತ್ತು ಅದರ ಮಿತ್ರರಾಷ್ಟಗಳು ರಷ್ಯಾವನ್ನು ಛಿದ್ರಗೊಳಿಸಲು ಮತ್ತು ಲೂಟಿ ಮಾಡಲು ಪ್ರಯತ್ನಿಸುತ್ತಿವೆ. ಆದರೆ ನಾವು ರಷ್ಯಾ ಮಾತ್ರವಲ್ಲದೇ ಇಡೀ ಪ್ರಪಂಚದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇವೆ. ಪಾಶ್ಚಿಮಾತ್ಯರಿಗೆ ರುಸೋಫೋಬಿಯಾ(ರಷ್ಯಾ ಕುರಿತು ಭಯ) ಕಾಡುತ್ತಿದೆ.
ನಮ್ಮ ವೈವಿಧ್ಯತೆ ಮತ್ತು ಸಂಸ್ಕೃತಿ, ಸಂಪ್ರದಾಯ, ಭಾಷೆಗಳು, ಜನಾಂಗೀಯ ಗುಂಪುಗಳ ಏಕತೆಯು ಪಾಶ್ಚಿಮಾತ್ಯ ಜನಾಂಗೀಯ ವಾದಿಗಳು ಮತ್ತು ವಸಾಹತುಶಾಹಿಗಳ ನಿಲುವುಗಳನ್ನು ಒಡೆಯುವ ಮತ್ತು ಬೇರ್ಪಡಿಸುವ ಅವರ ನಿಗ್ರಹ ಮತ್ತು ಶೋಷಣೆಯ ಕ್ರೂರ ಯೋಜನೆ ಹೊಂದಿಕೆಯಾಗುವುದಿಲ್ಲ. ಇದರಿಂದಾಗಿ ಕಲಹ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ.
ನಮ್ಮ ದೇಶದ ವಿರುದ್ಧ ನಡೆಯುವ ಆಕ್ರಮಣಕಾರಿ ಭಯೋತ್ಪಾದನೆ ಮತ್ತು ಉಗ್ರವಾದ, ಅಂತರ್ ಧರ್ಮೀಯ ಘರ್ಷಣೆ ಸೇರಿದಂತೆ ಯಾವುದೇ ಬಾಹ್ಯ ಹಸ್ತಕ್ಷೇಪ, ಪ್ರಚೋದನೆಗಳನ್ನು ಒಡ್ಡಿದರು ಅದನ್ನು ನಿಗ್ರಹಿಸುವ ಸಾಮಥ್ಯ ರಷ್ಯಾಗಿದೆ ಎಂದು ಪುಟಿನ್ ಪ್ರತಿಪಾದಿಸಿದ್ದಾರೆ.
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…