ಅಂತಾರಾಷ್ಟ್ರೀಯ

ರಷ್ಯಾ ಇಲ್ಲದೆ ಶಾಶ್ವತ, ಸ್ಥಿರ ಜಾಗತಿಕ ಸುವ್ಯವಸ್ಥೆ ಸಾಧ್ಯವಿಲ್ಲ : ಪುಟಿನ್‌

ಮಾಸ್ಕೊ: ಅಮೆರಿಕಾದ ಜಾಗತಿಕ ವ್ಯವಸ್ಥೆ ದುರ್ಬಲಗೊಳ್ಳುತ್ತಾ ಬರುತ್ತಿದೆ. ಆದರೆ, ನಮ್ಮ ದೇಶವು ಈಗ ಹೆಚ್ಚು ಸಮಾನವಾದ ಜಾಗತಿಕ ವ್ಯವಸ್ಥೆಯನ್ನು ರಚಿಸುವಲ್ಲಿ ಮುಂಚೂಣಿಯಲ್ಲಿದೆ. ಸಾರ್ವಭೌಮ, ಬಲಿಷ್ಟ ರಷ್ಯಾ ಇಲ್ಲದೆ ಶಾಶ್ವತ, ಸ್ಥಿರ ಜಾಗತಿಕ ಸುವ್ಯವಸ್ಥೆ ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್‌ ಪುಟಿನ್ ಹೇಳಿದ್ದಾರೆ.

ರಾಜ್ಯ ಉಕೇನ್‌ ಮೇಲೆ ಮಿಲಿಟರಿ ಕಾರ್ಯಾಚರಣೆ ಮಾಡುತ್ತಿರುವುದು ನಮ್ಮ ದೇಶವನ್ನು ನಾಶಮಾಡುವ ಪಾಶ್ಚಿಮಾತ್ಯರ ವಿರುದ್ಧದ ಸಂಘರ್ಷವಾಗಿದೆ. ರಷ್ಯಾವನ್ನು ಬಲಿಷ್ಟ, ಸ್ವತಂತ್ರ ಶಕ್ತಿಯನ್ನಾಗಿ, ನಾಗರಿಕ ದೇಶವನ್ನಾಗಿ ಉಳಿಸುವ ನಮ್ಮ ಉನ್ನತ ಐತಿಹಾಸಿಕ ಹಕ್ಕನ್ನು ರಕ್ಷಿಸುತ್ತಿದ್ದೇವೆ ಎಂದು ಪುಟಿನ್ ಹೇಳಿದ್ದಾರೆ.

ಅಮೆರಿಕ ಮತ್ತು ಅದರ ಮಿತ್ರರಾಷ್ಟಗಳು ರಷ್ಯಾವನ್ನು ಛಿದ್ರಗೊಳಿಸಲು ಮತ್ತು ಲೂಟಿ ಮಾಡಲು ಪ್ರಯತ್ನಿಸುತ್ತಿವೆ. ಆದರೆ ನಾವು ರಷ್ಯಾ ಮಾತ್ರವಲ್ಲದೇ ಇಡೀ ಪ್ರಪಂಚದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದೇವೆ. ಪಾಶ್ಚಿಮಾತ್ಯರಿಗೆ ರುಸೋಫೋಬಿಯಾ(ರಷ್ಯಾ ಕುರಿತು ಭಯ) ಕಾಡುತ್ತಿದೆ.

ನಮ್ಮ ವೈವಿಧ್ಯತೆ ಮತ್ತು ಸಂಸ್ಕೃತಿ, ಸಂಪ್ರದಾಯ, ಭಾಷೆಗಳು, ಜನಾಂಗೀಯ ಗುಂಪುಗಳ ಏಕತೆಯು ಪಾಶ್ಚಿಮಾತ್ಯ ಜನಾಂಗೀಯ ವಾದಿಗಳು ಮತ್ತು ವಸಾಹತುಶಾಹಿಗಳ ನಿಲುವುಗಳನ್ನು ಒಡೆಯುವ ಮತ್ತು ಬೇರ್ಪಡಿಸುವ ಅವರ ನಿಗ್ರಹ ಮತ್ತು ಶೋಷಣೆಯ ಕ್ರೂರ ಯೋಜನೆ ಹೊಂದಿಕೆಯಾಗುವುದಿಲ್ಲ. ಇದರಿಂದಾಗಿ ಕಲಹ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ.

ನಮ್ಮ ದೇಶದ ವಿರುದ್ಧ ನಡೆಯುವ ಆಕ್ರಮಣಕಾರಿ ಭಯೋತ್ಪಾದನೆ ಮತ್ತು ಉಗ್ರವಾದ, ಅಂತರ್ ಧರ್ಮೀಯ ಘರ್ಷಣೆ ಸೇರಿದಂತೆ ಯಾವುದೇ ಬಾಹ್ಯ ಹಸ್ತಕ್ಷೇಪ, ಪ್ರಚೋದನೆಗಳನ್ನು ಒಡ್ಡಿದರು ಅದನ್ನು ನಿಗ್ರಹಿಸುವ ಸಾಮಥ್ಯ ರಷ್ಯಾಗಿದೆ ಎಂದು ಪುಟಿನ್ ಪ್ರತಿಪಾದಿಸಿದ್ದಾರೆ.

andolanait

Share
Published by
andolanait

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

6 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

6 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

7 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

9 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

10 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

11 hours ago