ಬಾಗ್ದಾದ್ : ಗಾಝಾಪಟ್ಟಿಯ ಭವಿಷ್ಯದಲ್ಲಿ ಫೆಲಸ್ತೀನ್ ಪ್ರಾಧಿಕಾರ ಕೇಂದ್ರ ಪಾತ್ರವನ್ನು ವಹಿಸುವ ಅನಿವಾರ್ಯತೆ ಇದೆ ಎಂದು ಅಮೆರಿಕದ ಉನ್ನತ ರಾಜತಾಂತ್ರಿಕ ಅಧಿಕಾರಿ ಆಂಟೋನಿ ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ. ಹಮಾಸ್- ಇಸ್ರೇಲ್ ಕದನದ ಉದ್ವಿಗ್ನತೆ ನಡುವೆಯೇ ಇರಾಕ್ ಮುಖಂಡರ ಜತೆ ಮಾತುಕತೆ ನಡೆಸಿ ಈ ಪ್ರದೇಶದಲ್ಲಿ ಪ್ರವಾಸ ಕೈಗೊಂಡ ಅವರು, ಈ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ದಂಡೆ ನಗರವಾದ ರಮಲ್ಹಾದಲ್ಲಿ ಫೆಲಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮೊಹ್ಮದ್ ಅಬ್ಬಾಸ್ ಅವರನ್ನು ಭೇಟಿ ಮಾಡಲು ಇಸ್ರೇಲಿ ತಪಾಸಣಾ ಕೇಂದ್ರದ ಮೂಲಕ ಬ್ಲಿಂಕೆನ್ ಹಾದು ಹೋದರು. ಅಕ್ಟೋಬರ್ 7ರ ಇಸ್ರೇಲ್ ಮೇಲಿನ ದಾಳಿಯ ಬಳಿಕ ಬ್ಲಿಂಕೆನ್ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ.
ಫೆಲಸ್ತೀನಿಯನ್ನರ ಅಭಿಪ್ರಾಯಗಳು, ಧ್ವನಿಗಳು ಮತ್ತು ಆಶೋತ್ತರಗಳು ಗಾಝಾದ ಭವಿಷ್ಯದ ಬಗೆಗಿನ ಮಾತುಕತೆಯಲ್ಲಿ ಪ್ರಧಾನ ಅಂಶಗಳಾಗುತ್ತವೆ ಎಂದು ಬಾಗ್ದಾದ್ ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಸ್ಪಷ್ಟಪಡಿಸಿದರು.
ಗಾಝಾ ಮೇಲಿನ ವಾಯುದಾಳಿಯನ್ನು ಇಸ್ರೇಲ್ ಮುಂದುವರಿಸಿದ್ದು, ಗಾಝಾ ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಾಗಲೇ 9770 ಮಂದಿಯನ್ನು ಇಸ್ರೇಲಿ ಪಡೆಗಳು ಹತ್ಯೆ ಮಾಡಿವೆ. ಇಸ್ರೇಲ್ ತಕ್ಷಣ ಕದನ ವಿರಾಮ ಘೋಷಿಸಬೇಕು ಎಂಬ ಅಮೆರಿಕದ ನಿಲುವನ್ನು ಬ್ಲಿಂಕೇನ್ ಪುನರುಚ್ಚರಿಸಿದ್ದಾರೆ. ಮಾನವೀಯ ನೆರವಿಗಾಗಿ ಮನವಿ ಮಾಡುವುದು ಒಂದು ಪ್ರಕ್ರಿಯೆ. ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಮತ್ತು ವಿವರಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…