ಅಂತಾರಾಷ್ಟ್ರೀಯ

ಗಾಝಾ ಭವಿಷ್ಯಕ್ಕೆ ಫೆಲಸ್ತೀನ್ ಧ್ವನಿ ಪ್ರಮುಖ: ಆಂಟನಿ ಬ್ಲಿಂಕೆನ್

ಬಾಗ್ದಾದ್ : ಗಾಝಾಪಟ್ಟಿಯ ಭವಿಷ್ಯದಲ್ಲಿ ಫೆಲಸ್ತೀನ್ ಪ್ರಾಧಿಕಾರ ಕೇಂದ್ರ ಪಾತ್ರವನ್ನು ವಹಿಸುವ ಅನಿವಾರ್ಯತೆ ಇದೆ ಎಂದು ಅಮೆರಿಕದ ಉನ್ನತ ರಾಜತಾಂತ್ರಿಕ ಅಧಿಕಾರಿ ಆಂಟೋನಿ ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ. ಹಮಾಸ್- ಇಸ್ರೇಲ್ ಕದನದ ಉದ್ವಿಗ್ನತೆ ನಡುವೆಯೇ ಇರಾಕ್ ಮುಖಂಡರ ಜತೆ ಮಾತುಕತೆ ನಡೆಸಿ ಈ ಪ್ರದೇಶದಲ್ಲಿ ಪ್ರವಾಸ ಕೈಗೊಂಡ ಅವರು, ಈ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ದಂಡೆ ನಗರವಾದ ರಮಲ್ಹಾದಲ್ಲಿ ಫೆಲಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮೊಹ್ಮದ್ ಅಬ್ಬಾಸ್ ಅವರನ್ನು ಭೇಟಿ ಮಾಡಲು ಇಸ್ರೇಲಿ ತಪಾಸಣಾ ಕೇಂದ್ರದ ಮೂಲಕ ಬ್ಲಿಂಕೆನ್ ಹಾದು ಹೋದರು. ಅಕ್ಟೋಬರ್ 7ರ ಇಸ್ರೇಲ್ ಮೇಲಿನ ದಾಳಿಯ ಬಳಿಕ ಬ್ಲಿಂಕೆನ್ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ.

ಫೆಲಸ್ತೀನಿಯನ್ನರ ಅಭಿಪ್ರಾಯಗಳು, ಧ್ವನಿಗಳು ಮತ್ತು ಆಶೋತ್ತರಗಳು ಗಾಝಾದ ಭವಿಷ್ಯದ ಬಗೆಗಿನ ಮಾತುಕತೆಯಲ್ಲಿ ಪ್ರಧಾನ ಅಂಶಗಳಾಗುತ್ತವೆ ಎಂದು ಬಾಗ್ದಾದ್ ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಸ್ಪಷ್ಟಪಡಿಸಿದರು.

ಗಾಝಾ ಮೇಲಿನ ವಾಯುದಾಳಿಯನ್ನು ಇಸ್ರೇಲ್ ಮುಂದುವರಿಸಿದ್ದು, ಗಾಝಾ ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಾಗಲೇ 9770 ಮಂದಿಯನ್ನು ಇಸ್ರೇಲಿ ಪಡೆಗಳು ಹತ್ಯೆ ಮಾಡಿವೆ. ಇಸ್ರೇಲ್ ತಕ್ಷಣ ಕದನ ವಿರಾಮ ಘೋಷಿಸಬೇಕು ಎಂಬ ಅಮೆರಿಕದ ನಿಲುವನ್ನು ಬ್ಲಿಂಕೇನ್ ಪುನರುಚ್ಚರಿಸಿದ್ದಾರೆ. ಮಾನವೀಯ ನೆರವಿಗಾಗಿ ಮನವಿ ಮಾಡುವುದು ಒಂದು ಪ್ರಕ್ರಿಯೆ. ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಮತ್ತು ವಿವರಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

andolanait

Share
Published by
andolanait

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

8 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

11 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

11 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

13 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

14 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

15 hours ago