ಅಂತಾರಾಷ್ಟ್ರೀಯ

ಗಾಝಾ ಭವಿಷ್ಯಕ್ಕೆ ಫೆಲಸ್ತೀನ್ ಧ್ವನಿ ಪ್ರಮುಖ: ಆಂಟನಿ ಬ್ಲಿಂಕೆನ್

ಬಾಗ್ದಾದ್ : ಗಾಝಾಪಟ್ಟಿಯ ಭವಿಷ್ಯದಲ್ಲಿ ಫೆಲಸ್ತೀನ್ ಪ್ರಾಧಿಕಾರ ಕೇಂದ್ರ ಪಾತ್ರವನ್ನು ವಹಿಸುವ ಅನಿವಾರ್ಯತೆ ಇದೆ ಎಂದು ಅಮೆರಿಕದ ಉನ್ನತ ರಾಜತಾಂತ್ರಿಕ ಅಧಿಕಾರಿ ಆಂಟೋನಿ ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ. ಹಮಾಸ್- ಇಸ್ರೇಲ್ ಕದನದ ಉದ್ವಿಗ್ನತೆ ನಡುವೆಯೇ ಇರಾಕ್ ಮುಖಂಡರ ಜತೆ ಮಾತುಕತೆ ನಡೆಸಿ ಈ ಪ್ರದೇಶದಲ್ಲಿ ಪ್ರವಾಸ ಕೈಗೊಂಡ ಅವರು, ಈ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ದಂಡೆ ನಗರವಾದ ರಮಲ್ಹಾದಲ್ಲಿ ಫೆಲಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮೊಹ್ಮದ್ ಅಬ್ಬಾಸ್ ಅವರನ್ನು ಭೇಟಿ ಮಾಡಲು ಇಸ್ರೇಲಿ ತಪಾಸಣಾ ಕೇಂದ್ರದ ಮೂಲಕ ಬ್ಲಿಂಕೆನ್ ಹಾದು ಹೋದರು. ಅಕ್ಟೋಬರ್ 7ರ ಇಸ್ರೇಲ್ ಮೇಲಿನ ದಾಳಿಯ ಬಳಿಕ ಬ್ಲಿಂಕೆನ್ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ.

ಫೆಲಸ್ತೀನಿಯನ್ನರ ಅಭಿಪ್ರಾಯಗಳು, ಧ್ವನಿಗಳು ಮತ್ತು ಆಶೋತ್ತರಗಳು ಗಾಝಾದ ಭವಿಷ್ಯದ ಬಗೆಗಿನ ಮಾತುಕತೆಯಲ್ಲಿ ಪ್ರಧಾನ ಅಂಶಗಳಾಗುತ್ತವೆ ಎಂದು ಬಾಗ್ದಾದ್ ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಸ್ಪಷ್ಟಪಡಿಸಿದರು.

ಗಾಝಾ ಮೇಲಿನ ವಾಯುದಾಳಿಯನ್ನು ಇಸ್ರೇಲ್ ಮುಂದುವರಿಸಿದ್ದು, ಗಾಝಾ ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಾಗಲೇ 9770 ಮಂದಿಯನ್ನು ಇಸ್ರೇಲಿ ಪಡೆಗಳು ಹತ್ಯೆ ಮಾಡಿವೆ. ಇಸ್ರೇಲ್ ತಕ್ಷಣ ಕದನ ವಿರಾಮ ಘೋಷಿಸಬೇಕು ಎಂಬ ಅಮೆರಿಕದ ನಿಲುವನ್ನು ಬ್ಲಿಂಕೇನ್ ಪುನರುಚ್ಚರಿಸಿದ್ದಾರೆ. ಮಾನವೀಯ ನೆರವಿಗಾಗಿ ಮನವಿ ಮಾಡುವುದು ಒಂದು ಪ್ರಕ್ರಿಯೆ. ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಮತ್ತು ವಿವರಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

andolanait

Share
Published by
andolanait

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

3 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

3 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

3 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

3 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

6 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

6 hours ago