ಅಂತಾರಾಷ್ಟ್ರೀಯ

ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿಯ ಮೊದಲ ಪ್ರತಿಕ್ರಿಯೆ.!

ಬೆಂಗಳೂರು : ವಾಯ್ಸ್‌ ಆಫ್‌ ಗ್ಲೋಬಲ್‌ ಸೌತ್‌ ಸಮ್ಮಿಟ್‌ ವರ್ಚುವಲ್‌ ನಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ “ಡೀಪ್‌ ಫೇಕ್‌” ವೀಡಿಯೋಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎಐ (ಕೃತಕ ಬುದ್ದಿಮತ್ತರ) ದೊಡ್ಡ ಸಮಸ್ಯೆಯಾಗಿದ್ದು, ಇದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಲು ಅವರು ಮಾದ್ಯಮಗಳಿಗೆ ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಡೀಪ್‌ ಫೇಕ್‌ ಕುರಿತು ಮಾತನಾಡಿದ ಪ್ರಧಾನಿ ಮೋದಿ “ಇತ್ತೀಚೆಗೆ ನಾನು ಹಾಡು ಹಾಡುತ್ತಿರುವ ವೀಡಿಯೋ ನೋಡಿದೆ. ನನ್ನು ಇಷ್ಟಪಡುವ ಜನರು ಅದನ್ನು ಪಾರ್ವರ್ಡ ಮಾಡಿದ್ದಾರೆ. ಅಲ್ಲದೇ ಈ ಡೀಪ್‌ ಸಮಸ್ಯೆ ದೊಡ್ಡದಾಗಿದ್ದು, ಚಾಟ್‌ ಜಿಪಿಟಿಯು ಇದರ ಬಗ್ಗೆ ಬಳೆಕೆದಾರರಿಗೆ ಎಚ್ಚರಿಕೆ ನೀಡಬೇಕು ಎಂದು ಪ್ರಧಾನಿ ಸಲಹೆ ನೀಡಿದರು.

ಈ ತಂತ್ರಜ್ಞಾನವು ಸೌಥ್‌ ಮತ್ತು ನಾರ್ಥ್‌ ಗ್ಲೋಬಲ್‌ ನಡುವಿನ ಅಂತರವನ್ನು ಹೆಚ್ಚಿಸಬಾರದೆಂದು ಭಾರತ ಭಾವಿಸುತ್ತದೆ. ಎಐ ನ್ನು ಹಾಗೂ ತಂತ್ರಜ್ಞಾನವನ್ನು ಜವಾಬ್ದಾರಿಯಿಂದ ಬಳಸಬೇಕು. ಈ ಬಗ್ಗೆ ಮಾತನಾಡಲು ಎಲ್ಲಾ ರಾಷ್ಟ್ರಗಳಿಗೂ ಇದು ಸೂಕ್ತ ಸಮಯ. ಇವುಗಳನ್ನು ಉತ್ತೇಜಿಸಲು ಮುಂದಿನ ತಿಂಗಳು ಭಾರತವು ಆರ್ಟಿಫಿಷಿಯಲ್‌ ಗ್ಲೇಬಲ್‌ ಪಾರ್ಟ್ನರ್‌ಶಿಪ್‌ ಸಮ್ಮಿಟ್‌ಗೆ ಆತಿಥ್ಯ ವಹಿಸಲಿದೆ ಎದು ಪ್ರಧಾನಿ ಮೋದಿ ತಿಳಿಸಿದರು.

ಜಿ20 ಸಭೆಗಳಲ್ಲಿ ಗ್ಲೋಬಲ್​ ಸೌಥ್ ಆದ್ಯತೆ : ದೆಹಲಿ ಜಿ-20 ಡಿಕ್ಲರೇಶನ್‌ನಲ್ಲಿ ಗ್ಲೋಬಲ್ ಸೌತ್ ವಿಷಯವನ್ನು ಸೇರಿಸಲಾಗಿದೆ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ನೆನಪಿಸಿದ್ದಾರೆ. ಕಳೆದ ವರ್ಷ ನಡೆದ ಜಿ20 ಸಭೆಗಳಲ್ಲಿ ಗ್ಲೋಬಲ್​ ಸೌಥ್ ಆದ್ಯತೆಯನ್ನು ಭಾರತ ವಿವರಿಸಿದೆ ಎಂದು ಮೋದಿ ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತವು ಜಿ20 ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಂಡಾಗ, ಗ್ಲೋಬಲ್​​ ಸೌತ್ ಧ್ವನಿಯನ್ನು ಎತ್ತುವ ಜವಾಬ್ದಾರಿಯನ್ನು ನಾವು ತೆಗೆದುಕೊಂಡಿದ್ದೇವೆ. ಜಿ20 ಅನ್ನು ಅಂತರ್ಗತ, ಮಾನವೀಯ ಕೇಂದ್ರವನ್ನಾಗಿ ಮಾಡುವುದು ನಮ್ಮ ಆದ್ಯತೆಯಾಗಿ ತೆಗೆದುಕೊಂಡಿದ್ದೇವು. ಅದರ ಭಾಗವಾಗಿ ನಾವು ಈ ವರ್ಷದ ಜನವರಿಯಲ್ಲಿ ಮೊದಲ ಬಾರಿಗೆ ವಾಯ್ಸ್ ಆಫ್ ಗ್ಲೋಬಲ್ ಸೌತ್ ಸಮ್ಮಿಟ್ ಆಯೋಜಿಸಿದ್ದೇವೆ ಎಂದು ಪ್ರಧಾನಿ ಮೋದಿ ವಿವರಿಸಿದರು.

andolanait

Share
Published by
andolanait

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

9 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

13 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago