ಬೆಂಗಳೂರು : ವಾಯ್ಸ್ ಆಫ್ ಗ್ಲೋಬಲ್ ಸೌತ್ ಸಮ್ಮಿಟ್ ವರ್ಚುವಲ್ ನಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ “ಡೀಪ್ ಫೇಕ್” ವೀಡಿಯೋಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎಐ (ಕೃತಕ ಬುದ್ದಿಮತ್ತರ) ದೊಡ್ಡ ಸಮಸ್ಯೆಯಾಗಿದ್ದು, ಇದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಲು ಅವರು ಮಾದ್ಯಮಗಳಿಗೆ ಮನವಿ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಡೀಪ್ ಫೇಕ್ ಕುರಿತು ಮಾತನಾಡಿದ ಪ್ರಧಾನಿ ಮೋದಿ “ಇತ್ತೀಚೆಗೆ ನಾನು ಹಾಡು ಹಾಡುತ್ತಿರುವ ವೀಡಿಯೋ ನೋಡಿದೆ. ನನ್ನು ಇಷ್ಟಪಡುವ ಜನರು ಅದನ್ನು ಪಾರ್ವರ್ಡ ಮಾಡಿದ್ದಾರೆ. ಅಲ್ಲದೇ ಈ ಡೀಪ್ ಸಮಸ್ಯೆ ದೊಡ್ಡದಾಗಿದ್ದು, ಚಾಟ್ ಜಿಪಿಟಿಯು ಇದರ ಬಗ್ಗೆ ಬಳೆಕೆದಾರರಿಗೆ ಎಚ್ಚರಿಕೆ ನೀಡಬೇಕು ಎಂದು ಪ್ರಧಾನಿ ಸಲಹೆ ನೀಡಿದರು.
ಈ ತಂತ್ರಜ್ಞಾನವು ಸೌಥ್ ಮತ್ತು ನಾರ್ಥ್ ಗ್ಲೋಬಲ್ ನಡುವಿನ ಅಂತರವನ್ನು ಹೆಚ್ಚಿಸಬಾರದೆಂದು ಭಾರತ ಭಾವಿಸುತ್ತದೆ. ಎಐ ನ್ನು ಹಾಗೂ ತಂತ್ರಜ್ಞಾನವನ್ನು ಜವಾಬ್ದಾರಿಯಿಂದ ಬಳಸಬೇಕು. ಈ ಬಗ್ಗೆ ಮಾತನಾಡಲು ಎಲ್ಲಾ ರಾಷ್ಟ್ರಗಳಿಗೂ ಇದು ಸೂಕ್ತ ಸಮಯ. ಇವುಗಳನ್ನು ಉತ್ತೇಜಿಸಲು ಮುಂದಿನ ತಿಂಗಳು ಭಾರತವು ಆರ್ಟಿಫಿಷಿಯಲ್ ಗ್ಲೇಬಲ್ ಪಾರ್ಟ್ನರ್ಶಿಪ್ ಸಮ್ಮಿಟ್ಗೆ ಆತಿಥ್ಯ ವಹಿಸಲಿದೆ ಎದು ಪ್ರಧಾನಿ ಮೋದಿ ತಿಳಿಸಿದರು.
ಜಿ20 ಸಭೆಗಳಲ್ಲಿ ಗ್ಲೋಬಲ್ ಸೌಥ್ ಆದ್ಯತೆ : ದೆಹಲಿ ಜಿ-20 ಡಿಕ್ಲರೇಶನ್ನಲ್ಲಿ ಗ್ಲೋಬಲ್ ಸೌತ್ ವಿಷಯವನ್ನು ಸೇರಿಸಲಾಗಿದೆ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ನೆನಪಿಸಿದ್ದಾರೆ. ಕಳೆದ ವರ್ಷ ನಡೆದ ಜಿ20 ಸಭೆಗಳಲ್ಲಿ ಗ್ಲೋಬಲ್ ಸೌಥ್ ಆದ್ಯತೆಯನ್ನು ಭಾರತ ವಿವರಿಸಿದೆ ಎಂದು ಮೋದಿ ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಭಾರತವು ಜಿ20 ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಂಡಾಗ, ಗ್ಲೋಬಲ್ ಸೌತ್ ಧ್ವನಿಯನ್ನು ಎತ್ತುವ ಜವಾಬ್ದಾರಿಯನ್ನು ನಾವು ತೆಗೆದುಕೊಂಡಿದ್ದೇವೆ. ಜಿ20 ಅನ್ನು ಅಂತರ್ಗತ, ಮಾನವೀಯ ಕೇಂದ್ರವನ್ನಾಗಿ ಮಾಡುವುದು ನಮ್ಮ ಆದ್ಯತೆಯಾಗಿ ತೆಗೆದುಕೊಂಡಿದ್ದೇವು. ಅದರ ಭಾಗವಾಗಿ ನಾವು ಈ ವರ್ಷದ ಜನವರಿಯಲ್ಲಿ ಮೊದಲ ಬಾರಿಗೆ ವಾಯ್ಸ್ ಆಫ್ ಗ್ಲೋಬಲ್ ಸೌತ್ ಸಮ್ಮಿಟ್ ಆಯೋಜಿಸಿದ್ದೇವೆ ಎಂದು ಪ್ರಧಾನಿ ಮೋದಿ ವಿವರಿಸಿದರು.
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…