ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ನ ಮಿಯಾನ್ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್ಗಳು ದಾಳಿ ನಡೆಸಿದ್ದಾರೆ.
ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ವಾಯು ಪಡೆ ತಿಳಿಸಿದೆ.
ಭಾರೀ ಶಸ್ತ್ರಸಜ್ಜಿತರಾದ ಐದಾರು ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿತ್ತು. ಇದರಿಂದ ಎರಡೂ ಕಡೆಯಿಂದಲೂ ಗುಂಡಿನ ಚಕಮಕಿ ನಡೆಯಿತು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದು, ದಾಳಿ ವಿಫಲಗೊಳಿಸಲಾಗಿದೆ ಎಂದು ಪಿಎಎಫ್ ತಿಳಿಸಿದೆ.
ಶನಿವಾರ ನಡೆದ ಉಗ್ರರ ದಾಳಿಯು ವಿಫಲವಾಗಿದೆ. ಇದಕ್ಕೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿರುವ ಸೇನೆ, ಉಗ್ರರ ದಾಳಿಯನ್ನು ತಡೆದು ಆಸ್ತಿ ಮತ್ತು ಸೇನೆಯ ಸುರಕ್ಷತೆ ಬಗ್ಗೆ ಖಾತ್ರಿಪಡಿಸಿದೆ. ಪಾಕ್ ಸೇನೆಯು ಅಸಾಧಾರಣ ಪ್ರತಿಭೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯುನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಉಳಿದ ಮೂವರು ಉಗ್ರರನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ತಿಳಿಸಿದೆ.
ಆತ್ಮಹತ್ಯಾ ಬಾಂಬರ್ಗಳ ದಾಳಿಯಲ್ಲಿ ವಾಯುನೆಲೆಯಲ್ಲಿ ನಿಲ್ಲಿಸಲಾಗಿದ್ದ ಮೂರು ಯುದ್ಧ ವಿಮಾನಗಳು ಹಾನಿಯಾಗಿವೆ. ಕೆಲ ಇಂಧನ ಟ್ಯಾಂಕರ್ಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ಸೇನೆ ಹೇಳಿಕೊಂಡಿದೆ. ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ (ಟಿಜೆಪಿ) ಭಯೋತ್ಪಾದಕ ಸಂಘಟನೆಯು ಈ ದಾಳಿ ಹೊಣೆ ಹೊತ್ತುಕೊಂಡಿದೆ. ಸದ್ಯ ದಾಳಿ ಕುರಿತ ವೀಡಿಯೋಗಳು ಜಾಲತಾಣದಲ್ಲಿ ಹರಿದಾಡುತ್ತಿದೆ.
ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…
ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್.27ರಂದು ದೆಹಲಿಯ ಇಂದಿರಾ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…