ಅಂತಾರಾಷ್ಟ್ರೀಯ

ಪಾಕ್‌ ವಾಯುನೆಲೆ ಮೇಲೆ ಆತ್ಮಹತ್ಯಾ ಬಾಂಬರ್‌ಗಳ ದಾಳಿ : ಮೂವರು ಉಗ್ರರ ಹತ್ಯೆ

ಇಸ್ಲಾಮಾಬಾದ್‌ : ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್‌ಗಳು ದಾಳಿ ನಡೆಸಿದ್ದಾರೆ.

ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್‌ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್‌ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ವಾಯು ಪಡೆ ತಿಳಿಸಿದೆ.

ಭಾರೀ ಶಸ್ತ್ರಸಜ್ಜಿತರಾದ ಐದಾರು ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿತ್ತು. ಇದರಿಂದ ಎರಡೂ ಕಡೆಯಿಂದಲೂ ಗುಂಡಿನ ಚಕಮಕಿ ನಡೆಯಿತು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದು, ದಾಳಿ ವಿಫಲಗೊಳಿಸಲಾಗಿದೆ ಎಂದು ಪಿಎಎಫ್ ತಿಳಿಸಿದೆ.

ಶನಿವಾರ ನಡೆದ ಉಗ್ರರ ದಾಳಿಯು ವಿಫಲವಾಗಿದೆ. ಇದಕ್ಕೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿರುವ ಸೇನೆ, ಉಗ್ರರ ದಾಳಿಯನ್ನು ತಡೆದು ಆಸ್ತಿ ಮತ್ತು ಸೇನೆಯ ಸುರಕ್ಷತೆ ಬಗ್ಗೆ ಖಾತ್ರಿಪಡಿಸಿದೆ. ಪಾಕ್‌ ಸೇನೆಯು ಅಸಾಧಾರಣ ಪ್ರತಿಭೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯುನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಉಳಿದ ಮೂವರು ಉಗ್ರರನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ತಿಳಿಸಿದೆ.

ಆತ್ಮಹತ್ಯಾ ಬಾಂಬರ್‌ಗಳ ದಾಳಿಯಲ್ಲಿ ವಾಯುನೆಲೆಯಲ್ಲಿ ನಿಲ್ಲಿಸಲಾಗಿದ್ದ ಮೂರು ಯುದ್ಧ ವಿಮಾನಗಳು ಹಾನಿಯಾಗಿವೆ. ಕೆಲ ಇಂಧನ ಟ್ಯಾಂಕರ್‌ಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ಸೇನೆ ಹೇಳಿಕೊಂಡಿದೆ. ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ (ಟಿಜೆಪಿ) ಭಯೋತ್ಪಾದಕ ಸಂಘಟನೆಯು ಈ ದಾಳಿ ಹೊಣೆ ಹೊತ್ತುಕೊಂಡಿದೆ. ಸದ್ಯ ದಾಳಿ ಕುರಿತ ವೀಡಿಯೋಗಳು ಜಾಲತಾಣದಲ್ಲಿ ಹರಿದಾಡುತ್ತಿದೆ.

lokesh

Share
Published by
lokesh
Tags: bombpakistan

Recent Posts

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

2 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

2 hours ago

ಕಡಂಗಮರೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…

2 hours ago

ಗುಂಡ್ಲುಪೇಟೆ: ಟಿಪ್ಪರ್‌ಗಳಿಗೆ ಬೀಳಬೇಕಿದೆ ಬ್ರೇಕ್

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…

2 hours ago