ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ನ ಮಿಯಾನ್ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್ಗಳು ದಾಳಿ ನಡೆಸಿದ್ದಾರೆ.
ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ವಾಯು ಪಡೆ ತಿಳಿಸಿದೆ.
ಭಾರೀ ಶಸ್ತ್ರಸಜ್ಜಿತರಾದ ಐದಾರು ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿತ್ತು. ಇದರಿಂದ ಎರಡೂ ಕಡೆಯಿಂದಲೂ ಗುಂಡಿನ ಚಕಮಕಿ ನಡೆಯಿತು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದು, ದಾಳಿ ವಿಫಲಗೊಳಿಸಲಾಗಿದೆ ಎಂದು ಪಿಎಎಫ್ ತಿಳಿಸಿದೆ.
ಶನಿವಾರ ನಡೆದ ಉಗ್ರರ ದಾಳಿಯು ವಿಫಲವಾಗಿದೆ. ಇದಕ್ಕೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿರುವ ಸೇನೆ, ಉಗ್ರರ ದಾಳಿಯನ್ನು ತಡೆದು ಆಸ್ತಿ ಮತ್ತು ಸೇನೆಯ ಸುರಕ್ಷತೆ ಬಗ್ಗೆ ಖಾತ್ರಿಪಡಿಸಿದೆ. ಪಾಕ್ ಸೇನೆಯು ಅಸಾಧಾರಣ ಪ್ರತಿಭೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯುನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಉಳಿದ ಮೂವರು ಉಗ್ರರನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ತಿಳಿಸಿದೆ.
ಆತ್ಮಹತ್ಯಾ ಬಾಂಬರ್ಗಳ ದಾಳಿಯಲ್ಲಿ ವಾಯುನೆಲೆಯಲ್ಲಿ ನಿಲ್ಲಿಸಲಾಗಿದ್ದ ಮೂರು ಯುದ್ಧ ವಿಮಾನಗಳು ಹಾನಿಯಾಗಿವೆ. ಕೆಲ ಇಂಧನ ಟ್ಯಾಂಕರ್ಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ಸೇನೆ ಹೇಳಿಕೊಂಡಿದೆ. ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ (ಟಿಜೆಪಿ) ಭಯೋತ್ಪಾದಕ ಸಂಘಟನೆಯು ಈ ದಾಳಿ ಹೊಣೆ ಹೊತ್ತುಕೊಂಡಿದೆ. ಸದ್ಯ ದಾಳಿ ಕುರಿತ ವೀಡಿಯೋಗಳು ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…