ಅಂತಾರಾಷ್ಟ್ರೀಯ

ಪಾಕ್‌ ವಾಯುನೆಲೆ ಮೇಲೆ ಆತ್ಮಹತ್ಯಾ ಬಾಂಬರ್‌ಗಳ ದಾಳಿ : ಮೂವರು ಉಗ್ರರ ಹತ್ಯೆ

ಇಸ್ಲಾಮಾಬಾದ್‌ : ಪಾಕಿಸ್ತಾನದ ಪಂಜಾಬ್‌ನ ಮಿಯಾನ್‌ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್‌ಗಳು ದಾಳಿ ನಡೆಸಿದ್ದಾರೆ.

ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್‌ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್‌ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ವಾಯು ಪಡೆ ತಿಳಿಸಿದೆ.

ಭಾರೀ ಶಸ್ತ್ರಸಜ್ಜಿತರಾದ ಐದಾರು ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿತ್ತು. ಇದರಿಂದ ಎರಡೂ ಕಡೆಯಿಂದಲೂ ಗುಂಡಿನ ಚಕಮಕಿ ನಡೆಯಿತು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದು, ದಾಳಿ ವಿಫಲಗೊಳಿಸಲಾಗಿದೆ ಎಂದು ಪಿಎಎಫ್ ತಿಳಿಸಿದೆ.

ಶನಿವಾರ ನಡೆದ ಉಗ್ರರ ದಾಳಿಯು ವಿಫಲವಾಗಿದೆ. ಇದಕ್ಕೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿರುವ ಸೇನೆ, ಉಗ್ರರ ದಾಳಿಯನ್ನು ತಡೆದು ಆಸ್ತಿ ಮತ್ತು ಸೇನೆಯ ಸುರಕ್ಷತೆ ಬಗ್ಗೆ ಖಾತ್ರಿಪಡಿಸಿದೆ. ಪಾಕ್‌ ಸೇನೆಯು ಅಸಾಧಾರಣ ಪ್ರತಿಭೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯುನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಉಳಿದ ಮೂವರು ಉಗ್ರರನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ತಿಳಿಸಿದೆ.

ಆತ್ಮಹತ್ಯಾ ಬಾಂಬರ್‌ಗಳ ದಾಳಿಯಲ್ಲಿ ವಾಯುನೆಲೆಯಲ್ಲಿ ನಿಲ್ಲಿಸಲಾಗಿದ್ದ ಮೂರು ಯುದ್ಧ ವಿಮಾನಗಳು ಹಾನಿಯಾಗಿವೆ. ಕೆಲ ಇಂಧನ ಟ್ಯಾಂಕರ್‌ಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ಸೇನೆ ಹೇಳಿಕೊಂಡಿದೆ. ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ (ಟಿಜೆಪಿ) ಭಯೋತ್ಪಾದಕ ಸಂಘಟನೆಯು ಈ ದಾಳಿ ಹೊಣೆ ಹೊತ್ತುಕೊಂಡಿದೆ. ಸದ್ಯ ದಾಳಿ ಕುರಿತ ವೀಡಿಯೋಗಳು ಜಾಲತಾಣದಲ್ಲಿ ಹರಿದಾಡುತ್ತಿದೆ.

lokesh

Share
Published by
lokesh
Tags: bombpakistan

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

13 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

16 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

18 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

18 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

23 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

23 hours ago