ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ನ ಮಿಯಾನ್ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್ಗಳು ದಾಳಿ ನಡೆಸಿದ್ದಾರೆ.
ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ವಾಯು ಪಡೆ ತಿಳಿಸಿದೆ.
ಭಾರೀ ಶಸ್ತ್ರಸಜ್ಜಿತರಾದ ಐದಾರು ಜನರ ಗುಂಪು ಶನಿವಾರ ಮುಂಜಾನೆ ತೀವ್ರ ಸ್ವರೂಪದ ದಾಳಿ ಆರಂಭಿಸಿತ್ತು. ಇದರಿಂದ ಎರಡೂ ಕಡೆಯಿಂದಲೂ ಗುಂಡಿನ ಚಕಮಕಿ ನಡೆಯಿತು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದು, ದಾಳಿ ವಿಫಲಗೊಳಿಸಲಾಗಿದೆ ಎಂದು ಪಿಎಎಫ್ ತಿಳಿಸಿದೆ.
ಶನಿವಾರ ನಡೆದ ಉಗ್ರರ ದಾಳಿಯು ವಿಫಲವಾಗಿದೆ. ಇದಕ್ಕೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿರುವ ಸೇನೆ, ಉಗ್ರರ ದಾಳಿಯನ್ನು ತಡೆದು ಆಸ್ತಿ ಮತ್ತು ಸೇನೆಯ ಸುರಕ್ಷತೆ ಬಗ್ಗೆ ಖಾತ್ರಿಪಡಿಸಿದೆ. ಪಾಕ್ ಸೇನೆಯು ಅಸಾಧಾರಣ ಪ್ರತಿಭೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯುನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಉಳಿದ ಮೂವರು ಉಗ್ರರನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ತಿಳಿಸಿದೆ.
ಆತ್ಮಹತ್ಯಾ ಬಾಂಬರ್ಗಳ ದಾಳಿಯಲ್ಲಿ ವಾಯುನೆಲೆಯಲ್ಲಿ ನಿಲ್ಲಿಸಲಾಗಿದ್ದ ಮೂರು ಯುದ್ಧ ವಿಮಾನಗಳು ಹಾನಿಯಾಗಿವೆ. ಕೆಲ ಇಂಧನ ಟ್ಯಾಂಕರ್ಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ಸೇನೆ ಹೇಳಿಕೊಂಡಿದೆ. ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ (ಟಿಜೆಪಿ) ಭಯೋತ್ಪಾದಕ ಸಂಘಟನೆಯು ಈ ದಾಳಿ ಹೊಣೆ ಹೊತ್ತುಕೊಂಡಿದೆ. ಸದ್ಯ ದಾಳಿ ಕುರಿತ ವೀಡಿಯೋಗಳು ಜಾಲತಾಣದಲ್ಲಿ ಹರಿದಾಡುತ್ತಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…