ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಭಾನುವಾರ ಸಂಜೆ ಹೃದಯಾಘಾತವಾಗಿದೆ ಎಂದು ಟೆಲಿಗ್ರಾಮ್ ಚಾನಲ್ ಜನರಲ್ ಎಸ್ವಿಆರ್ ಸುಳ್ಳು ಸುದ್ದಿ ಹರಡಿರುವುದು ಬಯಲಾಗಿದೆ. ಈ ಟೆಲಿಗ್ರಾಮ್ ಚಾನಲ್ನ ಸುದ್ದಿಯನ್ನು ಉಲ್ಲೇಖಿಸಿ ಹಲವು ಮಾಧ್ಯಮಗಳು ಪುಟಿನ್ಗೆ ಹೃದಯಾಘಾತ ಎಂದು ವರದಿ ಮಾಡಿದ್ದವು. ಈ ಚಾನಲ್ ಅನ್ನು ಮಾಜಿ ಕ್ರೆಮ್ಲಿನ್ ಉದ್ಯೋಗಿಯೊಬ್ಬರು ನಡೆಸುತ್ತಿದ್ದಾರೆ.
ಈ ವದಂತಿ ಕುರಿತು ಸತ್ಯಶೋಧನಾ ಸಂಸ್ಥೆ ಆಲ್ಟ್ ನ್ಯೂಸ್ ಸಹಸ್ಥಾಪಕ ಮುಹಮ್ಮದ್ ಝುಬೇರ್ ಟ್ವೀಟ್ ಮಾಡಿ, ಪುಟಿನ್ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹರಡುವುದಕ್ಕೆ ಕುಖ್ಯಾತಿ ಪಡೆದ ಚಾನಲ್ ವರದಿಯನ್ನಾಧರಿಸಿ ಅದರ ಹೇಳಿಕೆಯನ್ನು ಪರಾಮರ್ಶಿಸದೆ ಹಲವು ಅಂತರರಾಷ್ಟ್ರೀಯ ಮಾಧ್ಯಮಗಳು ಕೂಡ ಪುಟಿನ್ಗೆ ಹೃದಯಾಘಾತ ಎಂಬ ಸುಳ್ಳು ಸುದ್ದಿಯನ್ನೇ ವರದಿ ಮಾಡಿವೆ ಎಂದು ಬರೆದಿದ್ದಾರೆ.
ಈ ಚಾನಲ್ ಪ್ರಕಾರ ಭಾನುವಾರ ರಾತ್ರಿ ಸುಮಾರು 9 ಗಂಟೆ ಹೊತ್ತಿಗೆ ಪುಟಿನ್ ಅವರ ಭದ್ರತಾ ಅಧಿಕಾರಿಗಳು ಅವರು ತಮ್ಮ ಬೆಡ್ರೂಂ ನೆಲದಲ್ಲಿ ಬಿದ್ದಿರುವುದನ್ನು ಗಮನಿಸಿದ್ದರು. ಪುಟಿನ್ ಪಕ್ಕದಲ್ಲೇ ಇದ್ದ ಆಹಾರ ಮತ್ತು ಪಾನೀಯಗಳಿದ್ದ ಮೇಜು ಕೂಡ ನೆಲಕ್ಕುರುಳಿತ್ತು ಎಂದು ಚಾನಲ್ ಹೇಳಿಕೊಂಡಿತ್ತು.
“ವೈದ್ಯರು ತಕ್ಷಣ ಪ್ರಥಮ ಚಿಕಿತ್ಸೆ ನೀಡಿದ ನಂತರ ಪುಟಿನ್ ಅಧಿಕೃತ ನಿವಾಸದಲ್ಲಿರುವ ವಿಶೇಷ ಐಸಿಯುಗೆ ಅವರನ್ನು ವರ್ಗಾಯಿಸಿದ್ದರಿಂದ ಪುಟಿನ್ ಹೃದಯ ಬಡಿತ ಮತ್ತೆ ಆರಂಭವಾಗಿ ಅವರಿಗೆ ಪ್ರಜ್ಞೆ ಮರುಕಳಿಸಿತು,” ಎಂದು ಚಾನಲ್ ವರದಿ ಮಾಡಿತ್ತು.
https://x.com/zoo_bear/status/1716726915388858373?s=20
https://x.com/zoo_bear/status/1716727445716713533?s=20
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…