ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಭಾನುವಾರ ಸಂಜೆ ಹೃದಯಾಘಾತವಾಗಿದೆ ಎಂದು ಟೆಲಿಗ್ರಾಮ್ ಚಾನಲ್ ಜನರಲ್ ಎಸ್ವಿಆರ್ ಸುಳ್ಳು ಸುದ್ದಿ ಹರಡಿರುವುದು ಬಯಲಾಗಿದೆ. ಈ ಟೆಲಿಗ್ರಾಮ್ ಚಾನಲ್ನ ಸುದ್ದಿಯನ್ನು ಉಲ್ಲೇಖಿಸಿ ಹಲವು ಮಾಧ್ಯಮಗಳು ಪುಟಿನ್ಗೆ ಹೃದಯಾಘಾತ ಎಂದು ವರದಿ ಮಾಡಿದ್ದವು. ಈ ಚಾನಲ್ ಅನ್ನು ಮಾಜಿ ಕ್ರೆಮ್ಲಿನ್ ಉದ್ಯೋಗಿಯೊಬ್ಬರು ನಡೆಸುತ್ತಿದ್ದಾರೆ.
ಈ ವದಂತಿ ಕುರಿತು ಸತ್ಯಶೋಧನಾ ಸಂಸ್ಥೆ ಆಲ್ಟ್ ನ್ಯೂಸ್ ಸಹಸ್ಥಾಪಕ ಮುಹಮ್ಮದ್ ಝುಬೇರ್ ಟ್ವೀಟ್ ಮಾಡಿ, ಪುಟಿನ್ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹರಡುವುದಕ್ಕೆ ಕುಖ್ಯಾತಿ ಪಡೆದ ಚಾನಲ್ ವರದಿಯನ್ನಾಧರಿಸಿ ಅದರ ಹೇಳಿಕೆಯನ್ನು ಪರಾಮರ್ಶಿಸದೆ ಹಲವು ಅಂತರರಾಷ್ಟ್ರೀಯ ಮಾಧ್ಯಮಗಳು ಕೂಡ ಪುಟಿನ್ಗೆ ಹೃದಯಾಘಾತ ಎಂಬ ಸುಳ್ಳು ಸುದ್ದಿಯನ್ನೇ ವರದಿ ಮಾಡಿವೆ ಎಂದು ಬರೆದಿದ್ದಾರೆ.
ಈ ಚಾನಲ್ ಪ್ರಕಾರ ಭಾನುವಾರ ರಾತ್ರಿ ಸುಮಾರು 9 ಗಂಟೆ ಹೊತ್ತಿಗೆ ಪುಟಿನ್ ಅವರ ಭದ್ರತಾ ಅಧಿಕಾರಿಗಳು ಅವರು ತಮ್ಮ ಬೆಡ್ರೂಂ ನೆಲದಲ್ಲಿ ಬಿದ್ದಿರುವುದನ್ನು ಗಮನಿಸಿದ್ದರು. ಪುಟಿನ್ ಪಕ್ಕದಲ್ಲೇ ಇದ್ದ ಆಹಾರ ಮತ್ತು ಪಾನೀಯಗಳಿದ್ದ ಮೇಜು ಕೂಡ ನೆಲಕ್ಕುರುಳಿತ್ತು ಎಂದು ಚಾನಲ್ ಹೇಳಿಕೊಂಡಿತ್ತು.
“ವೈದ್ಯರು ತಕ್ಷಣ ಪ್ರಥಮ ಚಿಕಿತ್ಸೆ ನೀಡಿದ ನಂತರ ಪುಟಿನ್ ಅಧಿಕೃತ ನಿವಾಸದಲ್ಲಿರುವ ವಿಶೇಷ ಐಸಿಯುಗೆ ಅವರನ್ನು ವರ್ಗಾಯಿಸಿದ್ದರಿಂದ ಪುಟಿನ್ ಹೃದಯ ಬಡಿತ ಮತ್ತೆ ಆರಂಭವಾಗಿ ಅವರಿಗೆ ಪ್ರಜ್ಞೆ ಮರುಕಳಿಸಿತು,” ಎಂದು ಚಾನಲ್ ವರದಿ ಮಾಡಿತ್ತು.
https://x.com/zoo_bear/status/1716726915388858373?s=20
https://x.com/zoo_bear/status/1716727445716713533?s=20
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…