ಅಂತಾರಾಷ್ಟ್ರೀಯ

ಪುಟಿನ್ ಆರೋಗ್ಯ ಕುರಿತ ಸುಳ್ಳು ಸುದ್ದಿ ಹರಡಿದ ಟೆಲಿಗ್ರಾಂ ಚಾನಲ್

ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರಿಗೆ ಭಾನುವಾರ ಸಂಜೆ ಹೃದಯಾಘಾತವಾಗಿದೆ ಎಂದು ಟೆಲಿಗ್ರಾಮ್‌ ಚಾನಲ್‌ ಜನರಲ್‌ ಎಸ್‌ವಿಆರ್‌ ಸುಳ್ಳು ಸುದ್ದಿ ಹರಡಿರುವುದು ಬಯಲಾಗಿದೆ. ಈ ಟೆಲಿಗ್ರಾಮ್‌ ಚಾನಲ್‌ನ ಸುದ್ದಿಯನ್ನು ಉಲ್ಲೇಖಿಸಿ ಹಲವು ಮಾಧ್ಯಮಗಳು ಪುಟಿನ್‌ಗೆ ಹೃದಯಾಘಾತ ಎಂದು ವರದಿ ಮಾಡಿದ್ದವು. ಈ ಚಾನಲ್‌ ಅನ್ನು ಮಾಜಿ ಕ್ರೆಮ್ಲಿನ್‌ ಉದ್ಯೋಗಿಯೊಬ್ಬರು ನಡೆಸುತ್ತಿದ್ದಾರೆ.

ಈ ವದಂತಿ ಕುರಿತು ಸತ್ಯಶೋಧನಾ ಸಂಸ್ಥೆ ಆಲ್ಟ್‌ ನ್ಯೂಸ್‌ ಸಹಸ್ಥಾಪಕ ಮುಹಮ್ಮದ್‌ ಝುಬೇರ್‌ ಟ್ವೀಟ್‌ ಮಾಡಿ, ಪುಟಿನ್‌ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹರಡುವುದಕ್ಕೆ ಕುಖ್ಯಾತಿ ಪಡೆದ ಚಾನಲ್‌ ವರದಿಯನ್ನಾಧರಿಸಿ ಅದರ ಹೇಳಿಕೆಯನ್ನು ಪರಾಮರ್ಶಿಸದೆ ಹಲವು ಅಂತರರಾಷ್ಟ್ರೀಯ ಮಾಧ್ಯಮಗಳು ಕೂಡ ಪುಟಿನ್‌ಗೆ ಹೃದಯಾಘಾತ ಎಂಬ ಸುಳ್ಳು ಸುದ್ದಿಯನ್ನೇ ವರದಿ ಮಾಡಿವೆ ಎಂದು ಬರೆದಿದ್ದಾರೆ.

ಈ ಚಾನಲ್‌ ಪ್ರಕಾರ ಭಾನುವಾರ ರಾತ್ರಿ ಸುಮಾರು 9 ಗಂಟೆ ಹೊತ್ತಿಗೆ ಪುಟಿನ್‌ ಅವರ ಭದ್ರತಾ ಅಧಿಕಾರಿಗಳು ಅವರು ತಮ್ಮ ಬೆಡ್‌ರೂಂ ನೆಲದಲ್ಲಿ ಬಿದ್ದಿರುವುದನ್ನು ಗಮನಿಸಿದ್ದರು. ಪುಟಿನ್‌ ಪಕ್ಕದಲ್ಲೇ ಇದ್ದ ಆಹಾರ ಮತ್ತು ಪಾನೀಯಗಳಿದ್ದ ಮೇಜು ಕೂಡ ನೆಲಕ್ಕುರುಳಿತ್ತು ಎಂದು ಚಾನಲ್‌ ಹೇಳಿಕೊಂಡಿತ್ತು.

“ವೈದ್ಯರು ತಕ್ಷಣ ಪ್ರಥಮ ಚಿಕಿತ್ಸೆ ನೀಡಿದ ನಂತರ ಪುಟಿನ್‌ ಅಧಿಕೃತ ನಿವಾಸದಲ್ಲಿರುವ ವಿಶೇಷ ಐಸಿಯುಗೆ ಅವರನ್ನು ವರ್ಗಾಯಿಸಿದ್ದರಿಂದ ಪುಟಿನ್‌ ಹೃದಯ ಬಡಿತ ಮತ್ತೆ ಆರಂಭವಾಗಿ ಅವರಿಗೆ ಪ್ರಜ್ಞೆ ಮರುಕಳಿಸಿತು,” ಎಂದು ಚಾನಲ್‌ ವರದಿ ಮಾಡಿತ್ತು.

https://x.com/zoo_bear/status/1716726915388858373?s=20

https://x.com/zoo_bear/status/1716727445716713533?s=20

 

andolanait

Share
Published by
andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

11 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

13 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

16 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

20 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

24 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

24 hours ago