ಕಾಬೂಲ್ : ಪಶ್ಚಿಮ ಅಫ್ಘಾನಿಸ್ತಾನ ಭೂಕಂಪದಲ್ಲಿ ಮೃತಪಟ್ಟಿರುವವರ ಸಂಖ್ಯೆ ಭಾನುವಾರ ತೀಕ್ಷ್ಣ ಏರಿಕೆ ಕಂಡಿದ್ದು, 2,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭೂಕಂಪದ ತೀವ್ರತೆಗೆ ಹಲವಾರು ಗ್ರಾಮಗಳು ನೆಲಸಮಗೊಂಡಿವೆ ಎಂದು ಎಎಫ್ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ 6.3 ತೀವ್ರತೆಯಲ್ಲಿ ಭೂಕಂಪ ಅಪ್ಪಳಿಸಿದ್ದು, ಇದಾದ ನಂತರ ಎಂಟು ಬಾರಿ ಲಘು ಭೂಕಂಪ ಸಂಭವಿಸಿದ್ದರಿಂದ ಹೆರಾತ್ ನ ಪ್ರಾಂತೀಯ ರಾಜಧಾನಿಯ ನೈರುತ್ಯ ಭಾಗದಿಂದ 30 ಕಿಮೀ (19 ಮೈಲುಗಳು) ದೂರವಿರುವ ಗ್ರಾಮಗಳಿಗೆ ತಲುಪಲು ರಕ್ಷಣಾ ಪಡೆಗಳು ಹರಸಾಹಸ ಪಡಬೇಕಾಯಿತು.
ಭೂಕಂಪದಲ್ಲಿ ಸಂಭವಿಸಿರುವ ಹಾನಿಯು ಇದೀಗ ಸ್ಪಷ್ಟವಾಗುತ್ತಿದ್ದು, “ದುರದೃಷ್ಟವಶಾತ್, ಗಾಯಾಳುಗಳ ಸಂಖ್ಯೆ ತೀರಾ ಹೆಚ್ಚಿದೆ” ಎಂದು ಉಪ ಸರ್ಕಾರಿ ವಕ್ತಾರ ಬಿಲಾಲ್ ಕರಿಮಿ ತಿಳಿಸಿದ್ದಾರೆ.
ಶನಿವಾರ ಸರಿರಾತ್ರಿಯಲ್ಲಿ ಝಿಂದಾ ಜನ್ ಜಿಲ್ಲೆಯ ಸರ್ಬೊಲ್ಯಾಂಡ್ ಗ್ರಾಮದಲ್ಲಿ ಭೂಕಂಪದ ಕೇಂದ್ರಬಿಂದುವಿನ ಬಳಿ ಭೂಮಿಯು ಐದು ಗಂಟೆಗಿಂತ ಹೆಚ್ಚು ಕಾಲ ಕಂಪಿಸಿದ್ದರಿಂದ ಹತ್ತಾರು ಮನೆಗಳು ನಾಶವಾಗಿರುವುದನ್ನು ಎಎಫ್ಪಿ ಸುದ್ದಿ ಸಂಸ್ಥೆಯ ವರದಿಗಾರರು ಗಮನಿಸಿದ್ದಾರೆ ಎಂದು ಹೇಳಲಾಗಿದೆ.
ಕಳೆದ ವರ್ಷ ಜೂನ್ ತಿಂಗಳಲ್ಲಿ 5.9 ತೀವ್ರತೆಯಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 1,000ಕ್ಕಿಂತ ಹೆಚ್ಚು ಮಂದಿ ಮೃತಪಟ್ಟು, ಸಹಸ್ರಾರು ಮಂದಿ ತಮ್ಮ ನಿವಾಸಗಳನ್ನು ಕಳೆದುಕೊಂಡಿದ್ದರು.
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…