ಕಾಬೂಲ್ : ಪಶ್ಚಿಮ ಅಫ್ಘಾನಿಸ್ತಾನ ಭೂಕಂಪದಲ್ಲಿ ಮೃತಪಟ್ಟಿರುವವರ ಸಂಖ್ಯೆ ಭಾನುವಾರ ತೀಕ್ಷ್ಣ ಏರಿಕೆ ಕಂಡಿದ್ದು, 2,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭೂಕಂಪದ ತೀವ್ರತೆಗೆ ಹಲವಾರು ಗ್ರಾಮಗಳು ನೆಲಸಮಗೊಂಡಿವೆ ಎಂದು ಎಎಫ್ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ 6.3 ತೀವ್ರತೆಯಲ್ಲಿ ಭೂಕಂಪ ಅಪ್ಪಳಿಸಿದ್ದು, ಇದಾದ ನಂತರ ಎಂಟು ಬಾರಿ ಲಘು ಭೂಕಂಪ ಸಂಭವಿಸಿದ್ದರಿಂದ ಹೆರಾತ್ ನ ಪ್ರಾಂತೀಯ ರಾಜಧಾನಿಯ ನೈರುತ್ಯ ಭಾಗದಿಂದ 30 ಕಿಮೀ (19 ಮೈಲುಗಳು) ದೂರವಿರುವ ಗ್ರಾಮಗಳಿಗೆ ತಲುಪಲು ರಕ್ಷಣಾ ಪಡೆಗಳು ಹರಸಾಹಸ ಪಡಬೇಕಾಯಿತು.
ಭೂಕಂಪದಲ್ಲಿ ಸಂಭವಿಸಿರುವ ಹಾನಿಯು ಇದೀಗ ಸ್ಪಷ್ಟವಾಗುತ್ತಿದ್ದು, “ದುರದೃಷ್ಟವಶಾತ್, ಗಾಯಾಳುಗಳ ಸಂಖ್ಯೆ ತೀರಾ ಹೆಚ್ಚಿದೆ” ಎಂದು ಉಪ ಸರ್ಕಾರಿ ವಕ್ತಾರ ಬಿಲಾಲ್ ಕರಿಮಿ ತಿಳಿಸಿದ್ದಾರೆ.
ಶನಿವಾರ ಸರಿರಾತ್ರಿಯಲ್ಲಿ ಝಿಂದಾ ಜನ್ ಜಿಲ್ಲೆಯ ಸರ್ಬೊಲ್ಯಾಂಡ್ ಗ್ರಾಮದಲ್ಲಿ ಭೂಕಂಪದ ಕೇಂದ್ರಬಿಂದುವಿನ ಬಳಿ ಭೂಮಿಯು ಐದು ಗಂಟೆಗಿಂತ ಹೆಚ್ಚು ಕಾಲ ಕಂಪಿಸಿದ್ದರಿಂದ ಹತ್ತಾರು ಮನೆಗಳು ನಾಶವಾಗಿರುವುದನ್ನು ಎಎಫ್ಪಿ ಸುದ್ದಿ ಸಂಸ್ಥೆಯ ವರದಿಗಾರರು ಗಮನಿಸಿದ್ದಾರೆ ಎಂದು ಹೇಳಲಾಗಿದೆ.
ಕಳೆದ ವರ್ಷ ಜೂನ್ ತಿಂಗಳಲ್ಲಿ 5.9 ತೀವ್ರತೆಯಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 1,000ಕ್ಕಿಂತ ಹೆಚ್ಚು ಮಂದಿ ಮೃತಪಟ್ಟು, ಸಹಸ್ರಾರು ಮಂದಿ ತಮ್ಮ ನಿವಾಸಗಳನ್ನು ಕಳೆದುಕೊಂಡಿದ್ದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…