ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: ಮೃತಪಟ್ಟವರ ಸಂಖ್ಯೆ 2000ಕ್ಕೆ ಏರಿಕೆ

ಕಾಬೂಲ್ : ಪಶ್ಚಿಮ ಅಫ್ಘಾನಿಸ್ತಾನ ಭೂಕಂಪದಲ್ಲಿ ಮೃತಪಟ್ಟಿರುವವರ ಸಂಖ್ಯೆ ಭಾನುವಾರ ತೀಕ್ಷ್ಣ ಏರಿಕೆ ಕಂಡಿದ್ದು, 2,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭೂಕಂಪದ ತೀವ್ರತೆಗೆ ಹಲವಾರು ಗ್ರಾಮಗಳು ನೆಲಸಮಗೊಂಡಿವೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶನಿವಾರ 6.3 ತೀವ್ರತೆಯಲ್ಲಿ ಭೂಕಂಪ ಅಪ್ಪಳಿಸಿದ್ದು, ಇದಾದ ನಂತರ ಎಂಟು ಬಾರಿ ಲಘು ಭೂಕಂಪ ಸಂಭವಿಸಿದ್ದರಿಂದ ಹೆರಾತ್ ನ ಪ್ರಾಂತೀಯ ರಾಜಧಾನಿಯ ನೈರುತ್ಯ ಭಾಗದಿಂದ 30 ಕಿಮೀ (19 ಮೈಲುಗಳು) ದೂರವಿರುವ ಗ್ರಾಮಗಳಿಗೆ ತಲುಪಲು ರಕ್ಷಣಾ ಪಡೆಗಳು ಹರಸಾಹಸ ಪಡಬೇಕಾಯಿತು.

ಭೂಕಂಪದಲ್ಲಿ ಸಂಭವಿಸಿರುವ ಹಾನಿಯು ಇದೀಗ ಸ್ಪಷ್ಟವಾಗುತ್ತಿದ್ದು, “ದುರದೃಷ್ಟವಶಾತ್, ಗಾಯಾಳುಗಳ ಸಂಖ್ಯೆ ತೀರಾ ಹೆಚ್ಚಿದೆ” ಎಂದು ಉಪ ಸರ್ಕಾರಿ ವಕ್ತಾರ ಬಿಲಾಲ್ ಕರಿಮಿ ತಿಳಿಸಿದ್ದಾರೆ.

ಶನಿವಾರ ಸರಿರಾತ್ರಿಯಲ್ಲಿ ಝಿಂದಾ ಜನ್ ಜಿಲ್ಲೆಯ ಸರ್ಬೊಲ್ಯಾಂಡ್ ಗ್ರಾಮದಲ್ಲಿ ಭೂಕಂಪದ ಕೇಂದ್ರಬಿಂದುವಿನ ಬಳಿ ಭೂಮಿಯು ಐದು ಗಂಟೆಗಿಂತ ಹೆಚ್ಚು ಕಾಲ ಕಂಪಿಸಿದ್ದರಿಂದ ಹತ್ತಾರು ಮನೆಗಳು ನಾಶವಾಗಿರುವುದನ್ನು ಎಎಫ್‌ಪಿ ಸುದ್ದಿ ಸಂಸ್ಥೆಯ ವರದಿಗಾರರು ಗಮನಿಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ 5.9 ತೀವ್ರತೆಯಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 1,000ಕ್ಕಿಂತ ಹೆಚ್ಚು ಮಂದಿ ಮೃತಪಟ್ಟು, ಸಹಸ್ರಾರು ಮಂದಿ ತಮ್ಮ ನಿವಾಸಗಳನ್ನು ಕಳೆದುಕೊಂಡಿದ್ದರು.

andolanait

Share
Published by
andolanait

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

2 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

22 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

23 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

23 hours ago