ಅಂತಾರಾಷ್ಟ್ರೀಯ

ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: ಮೃತಪಟ್ಟವರ ಸಂಖ್ಯೆ 2000ಕ್ಕೆ ಏರಿಕೆ

ಕಾಬೂಲ್ : ಪಶ್ಚಿಮ ಅಫ್ಘಾನಿಸ್ತಾನ ಭೂಕಂಪದಲ್ಲಿ ಮೃತಪಟ್ಟಿರುವವರ ಸಂಖ್ಯೆ ಭಾನುವಾರ ತೀಕ್ಷ್ಣ ಏರಿಕೆ ಕಂಡಿದ್ದು, 2,000ಕ್ಕೂ ಹೆಚ್ಚು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭೂಕಂಪದ ತೀವ್ರತೆಗೆ ಹಲವಾರು ಗ್ರಾಮಗಳು ನೆಲಸಮಗೊಂಡಿವೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶನಿವಾರ 6.3 ತೀವ್ರತೆಯಲ್ಲಿ ಭೂಕಂಪ ಅಪ್ಪಳಿಸಿದ್ದು, ಇದಾದ ನಂತರ ಎಂಟು ಬಾರಿ ಲಘು ಭೂಕಂಪ ಸಂಭವಿಸಿದ್ದರಿಂದ ಹೆರಾತ್ ನ ಪ್ರಾಂತೀಯ ರಾಜಧಾನಿಯ ನೈರುತ್ಯ ಭಾಗದಿಂದ 30 ಕಿಮೀ (19 ಮೈಲುಗಳು) ದೂರವಿರುವ ಗ್ರಾಮಗಳಿಗೆ ತಲುಪಲು ರಕ್ಷಣಾ ಪಡೆಗಳು ಹರಸಾಹಸ ಪಡಬೇಕಾಯಿತು.

ಭೂಕಂಪದಲ್ಲಿ ಸಂಭವಿಸಿರುವ ಹಾನಿಯು ಇದೀಗ ಸ್ಪಷ್ಟವಾಗುತ್ತಿದ್ದು, “ದುರದೃಷ್ಟವಶಾತ್, ಗಾಯಾಳುಗಳ ಸಂಖ್ಯೆ ತೀರಾ ಹೆಚ್ಚಿದೆ” ಎಂದು ಉಪ ಸರ್ಕಾರಿ ವಕ್ತಾರ ಬಿಲಾಲ್ ಕರಿಮಿ ತಿಳಿಸಿದ್ದಾರೆ.

ಶನಿವಾರ ಸರಿರಾತ್ರಿಯಲ್ಲಿ ಝಿಂದಾ ಜನ್ ಜಿಲ್ಲೆಯ ಸರ್ಬೊಲ್ಯಾಂಡ್ ಗ್ರಾಮದಲ್ಲಿ ಭೂಕಂಪದ ಕೇಂದ್ರಬಿಂದುವಿನ ಬಳಿ ಭೂಮಿಯು ಐದು ಗಂಟೆಗಿಂತ ಹೆಚ್ಚು ಕಾಲ ಕಂಪಿಸಿದ್ದರಿಂದ ಹತ್ತಾರು ಮನೆಗಳು ನಾಶವಾಗಿರುವುದನ್ನು ಎಎಫ್‌ಪಿ ಸುದ್ದಿ ಸಂಸ್ಥೆಯ ವರದಿಗಾರರು ಗಮನಿಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ 5.9 ತೀವ್ರತೆಯಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 1,000ಕ್ಕಿಂತ ಹೆಚ್ಚು ಮಂದಿ ಮೃತಪಟ್ಟು, ಸಹಸ್ರಾರು ಮಂದಿ ತಮ್ಮ ನಿವಾಸಗಳನ್ನು ಕಳೆದುಕೊಂಡಿದ್ದರು.

andolanait

Share
Published by
andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

51 mins ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago